ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.
ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…
2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…