ಕಸ್ತೂರಿ ರಂಗನ್ ವರದಿ ಅನುಷ್ಠಾನದಿಂದಾಗಿ ಬಾದಿತವಾಗಲಿರುವ ಸುಳ್ಯ ತಾಲೂಕಿನ 10 ಗ್ರಾಮ ಪಂಚಾಯತ್ ಗಳಲ್ಲಿ ಯೋಜನೆ ಕೈಬಿಡುವಂತೆ ಆಗ್ರಹಿಸಿ ನ.9 ರಂದು ಪ್ರತೀ ಗ್ರಾಮ ಪಂಚಾಯತ್ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಲು ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ಸುಳ್ಯ ತಾಲೂಕು ಸಮಿತಿ ನಿರ್ಣಯಿಸಿದೆ.
ಶುಕ್ರವಾರ ಗುತ್ತಿಗಾರಿನಲ್ಲಿ ಜರಗಿದ ಸುಳ್ಯ ತಾಲುಕು ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ.
ಅಂದು ವರದಿ ಬಾದಿತವಾಗಲಿರುವ ಪ್ರತೀ ಗ್ರಾಮಗಳಿಗೆ ತೆರಳಿ ಅಲ್ಲಿನ ಪಂಚಾಯತ್ ಮೂಲಕ ಸರಕಾರಕ್ಕೆ ಬೇಡಿಕೆ ಸಲ್ಲಿಸುವುದರೊಂದಿಗೆ, ಈ ಹಿಂದೆ ಪ್ರತೀ ಗ್ರಾಮಪಂಚಾಯತ್ ನ ವಿಶೇಷ ಗ್ರಾಮಸಭೆಯಲ್ಲಿ ಕೈಗೊಂಡು ಸರಕಾರಕ್ಕೆ ಸಲ್ಲಿಸಿದ್ದ ವರದಿಯನ್ನು ಮತ್ತೆ ಸರಕಾರದ ಗಮನಕ್ಕೆ ತರುವುದರೊಂದಿಗೆ, ವರದಿ ಬಾದಿತ ಗ್ರಾಮದ ಸಾರ್ವಜನಿಕರು ಮುಂದಿನ ಹೋರಾಟದಲ್ಲಿ ಪಾಲ್ಗೊಳ್ಳುವಂತೆ ಜಾಗೃತಿ ಮೂಡಿಸಲು ರೂಪುರೇಷೆಯನ್ನು ಕೈಗೊಳ್ಳಲಾಯಿತು.
ಸಭೆಯಲ್ಲಿ ವೇದಿಕೆ ಜಿಲ್ಲಾ ಸಮಿತಿ ಸದಸ್ಯರಾದ ಸತೀಶ್ ಟಿ.ಎನ್. ಕೊಲ್ಲಮೊಗ್ರು, ಭಾನುಪ್ರಕಾಶ್ ಪೆರುಮುಂಡ, ಭರತ್ ಕನ್ನಡ್ಕ, ಸದಸ್ಯರುಗಳಾದ ಜಯರಾಮ ಕಟ್ಟೆಮನೆ, ಬಸಪ್ಪ ಕೊಳಗೆ, ಚಂದ್ರಶೇಖರ ಕೊಂದಾಳ ಉಪಸ್ಥಿತರಿದ್ದರು.
ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…
ಮಳೆ ಮಾಹಿತಿ ಮೂಲಕ ಕೃಷಿಕರಿಗೆ ನೆರವಾಗುತ್ತಿರುವ ಸಾಯಿಶೇಖರ್ ಕರಿಕಳ ಅವರಿಗೆ ರೈತ ರತ್ನ…
ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್ಶಿಪ್ಗೆ ಭವ್ಯ ಚಾಲನೆ ದೊರೆತಿದ್ದು, ದೇಶದ 28…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್ 3ರಿಂದ ತೋಟದ…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…
ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…