Advertisement
The Rural Mirror ಕಾಳಜಿ

ಮಳೆಗಾಲ ಬಂದರೆ ಇಲ್ಲಿಯ ಜನರಿಗೆ ಭಯ..! | ಅಧಿಕಾರಿ-ಜನಪ್ರತಿನಿಧಿಗಳಿಗೆ ನಿರಾತಂಕ..! | ಇದು ಗ್ರಾಮೀಣ ಪ್ರತಿಬಿಂಬ

Share
ಗ್ರಾಮೀಣ ಭಾಗಗಳಿಗೆ ಸ್ವಾತಂತ್ರ್ಯ ಎಂದು ? ಹೀಗೊಂದು ಪ್ರಶ್ನೆ ಈಗ ಕೇಳಲೇಬೇಕಾಗಿದೆ. ಏಕೆಂದರೆ ಇಂದಿಗೂ ಹಲವು ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಮಳೆಗಾಲ ಬಂದರೆ ಭಯಗೊಳ್ಳುವ ಸ್ಥಿತಿ ಇದೆ. ಇದಕ್ಕೆ ಉದಾಹರಣೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಕಟ್ಟ ನಿವಾಸಿಗಳು. ಏನಿದು ಇವರ ಸಂಕಷ್ಟ ಇಲ್ಲಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರಕ್ಕೆ ತೆರಳುವ ರಸ್ತೆ ಇದೆ. ಇದು ಮೂಲ ರಸ್ತೆಯೂ ಆಗಿದೆ. ಈ ರಸ್ತೆಯಲ್ಲಿ  ಕಿರು ಸೇತುವೆಯೊಂದು ಸಿಗುತ್ತದೆ. ಈ ಸೇತುವೆ ಕುಸಿದ ಒಡೆದು ಹೋಗಿದೆ. ತಳ ಭಾಗವೂ ಅರ್ಧದಷ್ಟು ಕುಸಿದಿದೆ.
ಇಂದೋ ನಾಳೆಯೋ ಕುಸಿಯುವ ಭೀತಿ ಎದುರಾಗಿದೆ. ಕಳೆದ ಆರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಈಗ ಪ್ರತೀ ಮಳೆಗಾಲ ಬಂದರೆ ಸ್ಥಳೀಯರಿಗೆ  ರಸ್ತೆ ಸೇತುವೆ ಕೊಚ್ಚಿ ಹೋಗುವ ಭಯದಿಂದ ಇರುವ ಪರಿಸ್ಥಿತಿ ಇದೆ. ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.  ಮುಂದೆ ಸಂಪೂರ್ಣ ಕುಸಿಯುವ ಮುನ್ನ ಅಥವಾ ಅನಾಹುತವಾಗುವ ಮುನ್ನ ಯಾರಾದರೂ ಎಚ್ಚೆತ್ತುಕೊಂಡಾರೆಯೇ ಎಂದು ಜನರು ಕೇಳುವ ಸ್ಥಿತಿ ಬಂದಿದೆ. ಆಡಳಿತಕ್ಕೆ ಕೇಳಿಸೀತೇ ? ಜನಪ್ರತಿನಿಧಿಗಳು ಗಮನಿಸಿಯಾರೇ ?
ಕಳೆದ 6  ವರ್ಷಗಳಿಂದ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರದ ಕಿರು ಸೇತುವೆ ಕುಸಿದು ಹೋಗಿದೆ. ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಸಂಬಂಧಿತರು ಈ ಕಡೆ ಸ್ಪಂದಿಸಿದರೆ ಉತ್ತಮ ಎನ್ನುತ್ತಾರೆ ಮಿಥುನ್‌ ಕುಮಾರ್.
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

13 hours ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

19 hours ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

23 hours ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

1 day ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

1 day ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

1 day ago