Advertisement
The Rural Mirror ಕಾಳಜಿ

ಮಳೆಗಾಲ ಬಂದರೆ ಇಲ್ಲಿಯ ಜನರಿಗೆ ಭಯ..! | ಅಧಿಕಾರಿ-ಜನಪ್ರತಿನಿಧಿಗಳಿಗೆ ನಿರಾತಂಕ..! | ಇದು ಗ್ರಾಮೀಣ ಪ್ರತಿಬಿಂಬ

Share
ಗ್ರಾಮೀಣ ಭಾಗಗಳಿಗೆ ಸ್ವಾತಂತ್ರ್ಯ ಎಂದು ? ಹೀಗೊಂದು ಪ್ರಶ್ನೆ ಈಗ ಕೇಳಲೇಬೇಕಾಗಿದೆ. ಏಕೆಂದರೆ ಇಂದಿಗೂ ಹಲವು ಗ್ರಾಮೀಣ ಪ್ರದೇಶಗಳು ಮೂಲಭೂತ ಸೌಕರ್ಯದಿಂದ ವಂಚಿತವಾಗಿದೆ. ಮಳೆಗಾಲ ಬಂದರೆ ಭಯಗೊಳ್ಳುವ ಸ್ಥಿತಿ ಇದೆ. ಇದಕ್ಕೆ ಉದಾಹರಣೆ ಸುಳ್ಯ ತಾಲೂಕಿನ ಕೊಲ್ಲಮೊಗ್ರ ಕಟ್ಟ ನಿವಾಸಿಗಳು. ಏನಿದು ಇವರ ಸಂಕಷ್ಟ ಇಲ್ಲಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರಕ್ಕೆ ತೆರಳುವ ರಸ್ತೆ ಇದೆ. ಇದು ಮೂಲ ರಸ್ತೆಯೂ ಆಗಿದೆ. ಈ ರಸ್ತೆಯಲ್ಲಿ  ಕಿರು ಸೇತುವೆಯೊಂದು ಸಿಗುತ್ತದೆ. ಈ ಸೇತುವೆ ಕುಸಿದ ಒಡೆದು ಹೋಗಿದೆ. ತಳ ಭಾಗವೂ ಅರ್ಧದಷ್ಟು ಕುಸಿದಿದೆ.
ಇಂದೋ ನಾಳೆಯೋ ಕುಸಿಯುವ ಭೀತಿ ಎದುರಾಗಿದೆ. ಕಳೆದ ಆರು ವರ್ಷಗಳಿಂದ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನ ಆಗಿಲ್ಲ. ಹೀಗಾಗಿ ಈಗ ಪ್ರತೀ ಮಳೆಗಾಲ ಬಂದರೆ ಸ್ಥಳೀಯರಿಗೆ  ರಸ್ತೆ ಸೇತುವೆ ಕೊಚ್ಚಿ ಹೋಗುವ ಭಯದಿಂದ ಇರುವ ಪರಿಸ್ಥಿತಿ ಇದೆ. ರಸ್ತೆ ಸಂಪರ್ಕ ಕಡಿತವಾಗುವ ಭೀತಿ ಎದುರಾಗಿದೆ.  ಮುಂದೆ ಸಂಪೂರ್ಣ ಕುಸಿಯುವ ಮುನ್ನ ಅಥವಾ ಅನಾಹುತವಾಗುವ ಮುನ್ನ ಯಾರಾದರೂ ಎಚ್ಚೆತ್ತುಕೊಂಡಾರೆಯೇ ಎಂದು ಜನರು ಕೇಳುವ ಸ್ಥಿತಿ ಬಂದಿದೆ. ಆಡಳಿತಕ್ಕೆ ಕೇಳಿಸೀತೇ ? ಜನಪ್ರತಿನಿಧಿಗಳು ಗಮನಿಸಿಯಾರೇ ?
ಕಳೆದ 6  ವರ್ಷಗಳಿಂದ ಕೊಲ್ಲಮೊಗ್ರದಿಂದ ಕಟ್ಟ – ಗೋವಿಂದನಗರದ ಕಿರು ಸೇತುವೆ ಕುಸಿದು ಹೋಗಿದೆ. ಈಗ ಸಂಪರ್ಕ ಕಡಿತದ ಭೀತಿ ಎದುರಾಗಿದೆ. ಸಂಬಂಧಿತರು ಈ ಕಡೆ ಸ್ಪಂದಿಸಿದರೆ ಉತ್ತಮ ಎನ್ನುತ್ತಾರೆ ಮಿಥುನ್‌ ಕುಮಾರ್.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

2 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

3 hours ago

ದೇಹ–ಮನಸ್ಸು–ಆತ್ಮದ ಸಮತೋಲನವೇ ನಿಜವಾದ ಆರೋಗ್ಯ: ಆಯುರ್ವೇದದ ಪರಮ ಗುರಿ ಆತ್ಮಜ್ಞಾನ – ರಾಘವೇಶ್ವರ ಶ್ರೀ

ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…

1 day ago

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 days ago