ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಜೀವನದ ಹಾದಿಯಲ್ಲಿ, ಹುಟ್ಟು-ಸಾವು ಮದ್ಯದಲ್ಲಿ ಚರಿತ್ರೆ ಸೃಷ್ಟಿಸುವ ಅವಕಾಶಗಳಿವೆ…
ಪ್ರತಿಯೊಂದು ಹೆಜ್ಜೆಯಲ್ಲೂ ಸೋಲು ಒಂದು ಪಾಠವಾಗಿ, ಗೆಲುವು ಪ್ರತಿಫಲವಾಗಿ ದೊರೆಯುವುದು ಸಾಧನೆಯ ಹಾದಿಯಲ್ಲಿ…
ಸೋಲಿಗೆಂದು ಹೆದರದೆ-ಬೆದರದೆ,
ನೋವಿಗೆಂದು ಜಗ್ಗದೆ-ಕುಗ್ಗದೆ ಸಾಗುವುದೇ ಜೀವನ,
ಮುಂದೆ ಸಾಗುವುದೇ ಜೀವನ…
ರಾತ್ರಿ ಕಾಣುವ ಕನಸೆಲ್ಲಾ ಎಂದಿಗೂ ನನಸಾಗದು…
ಪ್ರಯತ್ನವು ಇಲ್ಲದೇ ಫಲವು ಎಂದಿಗೂ ದೊರೆಯದು…
ಬದುಕಿನ ದಾರಿಯಲ್ಲಿ, ಚಲಿಸುವ ಪಥಗಳಲ್ಲಿ ಏನೋ ಒಂದು ಕಥೆಗಳಿವೆ…
ಹೇಳಲು ಆಗದ ಕಥೆಗಳು, ಹೇಳಿಯೂ ತೀರದ ಕಥೆಗಳು ನಮ್ಮ-ನಿಮ್ಮ ಬದುಕಿನಲ್ಲಿ ನೂರಾರು…
ನಮ್ಮ ಬದುಕಿನ ಕಥೆಗಳೆಲ್ಲಾ ಮುಂದೆ ಒಂದು ಚರಿತ್ರೆಯಾಗಿ ಎಲ್ಲರಿಗೂ ಸ್ಪೂರ್ತಿಯಾಗಿ ಬದುಕುವುದೇ ಜೀವನ,
ನಾವು ಸತ್ತ ಮೇಲೂ ಬದುಕುವುದೇ ಜೀವನ…
# ಉಲ್ಲಾಸ್ ಕಜ್ಜೋಡಿ
ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…
ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…
ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…
ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…
ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…
ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…