ಅಂತರಾಷ್ಟ್ರೀಯ ಮಟ್ಟ  ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸ್ಫರ್ಧೆಯಲ್ಲಿ ಬಹುಮಾನ |

January 8, 2022
2:21 PM

ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ  ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….

Advertisement

ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ

ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ

ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ

ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ

ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ

ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ

# ಡಾ | ವಾಣಿಶ್ರೀ ಕಾಸರಗೋಡು

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ
ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |
December 9, 2024
6:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group