Advertisement
ಸಾಹಿತ್ಯ

ಅಂತರಾಷ್ಟ್ರೀಯ ಮಟ್ಟ  ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸ್ಫರ್ಧೆಯಲ್ಲಿ ಬಹುಮಾನ |

Share

ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ  ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….

ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ

ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ

ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ

ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ

ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ

ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ

# ಡಾ | ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago