Advertisement
ಸಾಹಿತ್ಯ

ಅಂತರಾಷ್ಟ್ರೀಯ ಮಟ್ಟ  ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸ್ಫರ್ಧೆಯಲ್ಲಿ ಬಹುಮಾನ |

Share

ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ  ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….

ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ

ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ

ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ

ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ

ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ

ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ

# ಡಾ | ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-03-2026 | ಕರ್ನಾಟಕದಲ್ಲಿ ಬಿಸಿಲಿನ ಅಬ್ಬರ ಶುರು..! ಇನ್ನು 10 ದಿನ ಮಳೆಯ ಲಕ್ಷಣ ಇಲ್ಲ

ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…

13 hours ago

ಅಡಿಕೆ ಮಾರುಕಟ್ಟೆ | ಕೆಲವು ಮಾರುಕಟ್ಟೆಗಳಲ್ಲಿ ಏರಿಕೆ, ಕೆಲವು ಸ್ಥಿರ – ಸಿಂಗಲ್‌ ಚೋಲ್‌ ಗೆ ಬೇಡಿಕೆ..! | ರಬ್ಬರ್ ದರದಲ್ಲಿ ಸ್ವಲ್ಪ ಕುಸಿತ

ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್‌, ಟಿಎಸ್‌ಎಸ್‌, ತುಮ್ಕೋಸ್‌, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…

14 hours ago

ಕಾಡಾನೆ ನಿಯಂತ್ರಣಕ್ಕೆ ರಾಜ್ಯದ ಕ್ರಮ : ಎಲಿಫೆಂಟ್ ಟಾಸ್ಕ್ ಫೋರ್ಸ್ ರಚನೆ

ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…

16 hours ago

ಕಾಡಾನೆ ಹಾವಳಿ ತಡೆಗೆ ಸರ್ಕಾರದ ಕ್ರಮ : ಕೊಪ್ಪ ಅರಣ್ಯ ವಿಭಾಗಕ್ಕೆ ₹12.77 ಕೋಟಿ, ರೈಲ್ವೆ ಬ್ಯಾರಿಕೇಡ್ ಅಳವಡಿಕೆ

ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…

16 hours ago

ಭವಿಷ್ಯದ ಬಾಳೆ ಬೆಳೆ ಉಳಿಸುವ ಗುಟ್ಟು ಕಾಡು ಬಾಳೆ ಜಾತಿಯಲ್ಲಿ!

ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…

1 day ago

ಕೃಷಿ ಮಾರುಕಟ್ಟೆ ವರದಿ | ಅಡಿಕೆ ಮಾರುಕಟ್ಟೆಯಲ್ಲಿ ಮಿಶ್ರ ಫಲ…!

ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…

2 days ago