Advertisement
ಸಾಹಿತ್ಯ

ಅಂತರಾಷ್ಟ್ರೀಯ ಮಟ್ಟ  ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಸ್ಫರ್ಧೆಯಲ್ಲಿ ಬಹುಮಾನ |

Share

ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ  ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….

Advertisement

ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ

ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ

ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ

ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ

ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ

ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ

# ಡಾ | ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

9 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

1 day ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago