ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….
ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ
ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ
ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ
ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ
ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ
ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ
# ಡಾ | ವಾಣಿಶ್ರೀ ಕಾಸರಗೋಡು
ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್ಫೋನ್(Ear Phone)…
ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…
ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…
ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…
ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…
ದಕ್ಷಿಣ ಭಾರತದಲ್ಲಿ ಭಾರೀ ಮಳೆಯ ಎಚ್ಚರಿಕೆ ಇದೆ. ಅದೇ ರೀತಿ ನೈರುತ್ಯ ಮಾನ್ಸೂನ್…