ಅಂತರಾಷ್ಟ್ರೀಯ ಮಟ್ಟ ಪ್ರಥಮ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆ ಬೆಂಗಳೂರು ಇವರು ಆಯೋಜಿಸಿರುವ ಅಕ್ಷರದವ್ವ ಸಾವಿತ್ರಿ ಬಾಪುಲೆ ಬಗ್ಗೆ ನಡೆಯುವ ಸ್ಪರ್ಧೆಯಲ್ಲಿ ಕಾಸರಗೋಡು ಜಿಲ್ಲೆಯ ಡಾ | ವಾಣಿಶ್ರೀ ಕಾಸರಗೋಡು ಬರೆದಿರುವ ಕವನಕ್ಕೆ ಪ್ರಥಮ ಬಹುಮಾನ ಬಂದಿರುತ್ತದೆ. ಈ ಕವನ ಇಲ್ಲಿದೆ….
ಸಾವಿರಾರು ದೀಪಗಳನ್ನು ಹಚ್ಚಿದ
ಆಧುನಿಕ ಶಿಕ್ಷಣದ ತಾಯಿ
ಅಕ್ಷರಸ್ತ ಪ್ರತೀ ಮಹಿಳೆಯ ಮನದಲ್ಲಿ
ನೆಲೆಸಿರುವ ಸಾವಿತ್ರಿ ಭಾಯಿ
ಧಮನಿತ ಸಮುದಾಯದ ಶಿಕ್ಷಣಕ್ಕಾಗಿ
ಶಾಲೆಯನ್ನು ಸ್ಥಾಪಿಸಿದ ಕ್ರಾಂತಿಕಾರಿ
ಸ್ತ್ರೀ ವಿಮೋಚನೆ ಕನಸಾಗಿದ್ದ ಕಾಲದಲ್ಲಿ
ಅದ ನನಸಾಗಿಸಲು ಶ್ರಮಿಸಿದ ರೂವಾರಿ
ಬ್ರಿಟಿಷ್ ಸರಕಾರದಿಂದ ಭಾರತದ ಪ್ರಥಮ
ಒಳ್ಳೆಯ ಅದ್ಯಾಪಕಿ ಬಿರುದು ಪಡೆದ ಕೀರ್ತಿ
ವಿಧವೆಯರ ತಲೆ ಬೋಳಿಸುವ ಪದ್ದತಿಯ
ಪ್ರಭಲವಾಗಿ ವಿರೋಧಿಸಿದ ಹೋರಾಟಗಾರ್ತಿ
ಅನಾಥ ಮಕ್ಕಳ ಪಾಲನೆಗೈಯುವ ಪುನರ್ವಸತಿ
ಕೇಂದ್ರವ ಸ್ಥಾಪಿಸಿ ಬದುಕಿಗೆ ನೆಲೆಕೊಟ್ಟ ಸಾಧಕಿ
ಮೊಟ್ಟ ಮೊದಲು ಕಾನೂನು ಸಲಹೆ ಪಡೆದು
ಮದುವೆ ಮಾಡಿ ಇತಿಹಾಸ ಬರೆದ ಶಿಕ್ಷಕಿ
ಹೆಣ್ಣೊಬ್ಬಳು ಶಿಕ್ಷಕಿಯಾಗೋದು ಧರ್ಮಕ್ಕೂ
ಸಮಾಜಕ್ಕೂ ದ್ರೋಹ ಬಗೆದಂತೆ ಅನ್ನುವರಿಲ್ಲಿ
ತಳ ಸಮುದಾಯದ ಹೆಣ್ಣು ಮಕ್ಕಳ
ಶಾಲೆ ತೆರೆದರು ಪೂಣೆಯಲ್ಲಿ
ಬಾರತದ ದಿಟ್ಟ ಹೋರಾಟಗಾರ್ತಿ ಪ್ರಥಮ ಶಿಕ್ಷಕಿ
ಖಾದಿ ಸೀರೆಯಲಿ ದಣಿವರಿಯದ ಸತ್ಯಶೋಧಕಿ
ಸ್ತ್ರೀ ಶಿಕ್ಷಣಕ್ಕೆ ಅನುವು ಮಾಡಿಕೊಟ್ಟ ಸಾಧಕಿ
ಪ್ಲೇಗ್ ರೋಗಿಗಳ ಸೇವೆಯಲ್ಲಿ ಪ್ಲೇಗಿಗೆ ಬಲಿಯಾದ ನಾಯಕಿ
# ಡಾ | ವಾಣಿಶ್ರೀ ಕಾಸರಗೋಡು
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…