ಕವನ | ಒಂದಿಷ್ಟು ಹೊತ್ತು ಕೇಳೆನ್ನ ಮಾತು…

October 14, 2021
7:31 AM

ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ

ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ

ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?
July 8, 2026
12:42 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ವಿವಾಹದ ಬದಲಾಗುತ್ತಿರುವ ಮುಖ
July 5, 2026
2:16 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ
July 5, 2026
7:42 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror