ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ
ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ
ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ
# ಅಪೂರ್ವ ಚೇತನ್ ಪೆರಂದೋಡಿ
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…