ಅನುಕ್ರಮ

ಕವನ | ಒಂದಿಷ್ಟು ಹೊತ್ತು ಕೇಳೆನ್ನ ಮಾತು…

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ

Advertisement
Advertisement

ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ

ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

9 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

17 hours ago

ಕರಾವಳಿ ಹಾಗೂ ರಾಜ್ಯದ ಹಲವೆಡೆ ಧಾರಾಕಾರ ಮಳೆ |

ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…

23 hours ago

ಈ ರಾಶಿಯವರ ಜಾತಕದಲ್ಲಿ ಗುರು ಬಲ | ಗಜಕೇಸರಿ ಯೋಗದಿಂದ ಸಕಲೈಶ್ವರ್ಯ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

24 hours ago

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ  ಘಟನೆ ಗುಜರಾತಿನ ಅಹಮದಾಬಾದ್​​ನಲ್ಲಿ…

2 days ago

ಹವಾಮಾನ ವರದಿ | 12-06-2025 | ಮುಂದೂಡಿದ ಭಾರೀ ಮಳೆ..! | ಜೂ.13 ರಿಂದ ಮುಂದುವರಿಯುವ ಮಳೆ |

ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…

2 days ago