Advertisement
ಅನುಕ್ರಮ

ಕವನ | ಒಂದಿಷ್ಟು ಹೊತ್ತು ಕೇಳೆನ್ನ ಮಾತು…

Share

ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ

Advertisement

ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ

ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

9 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago

ಪರರನ್ನು ಮೆಟ್ಟಿಲಾಗಿಸಿದ ಸಾಧನೆ ಶಾಶ್ವತವಲ್ಲ: ಆತ್ಮವಂಚನೆಯ ಅಂಧಕಾರದತ್ತ ಕರೆದೊಯ್ಯುವ ಮಾರ್ಗ

ಇತರರ ಪರಿಶ್ರಮವನ್ನು ಮೆಟ್ಟಿಲಾಗಿಸಿಕೊಂಡ ಸಾಧನೆ ತಾತ್ಕಾಲಿಕವಾಗಿದ್ದು, ನಿಜವಾದ ಯಶಸ್ಸು ಸ್ವಪರಿಶ್ರಮ, ಸತ್ಯ ಮತ್ತು…

1 day ago

ಹಿರಿಯರ ಪರಿಶ್ರಮದ ಫಲ ಮಕ್ಕಳಿಗೆ ಪರವಾನಗಿ ಆಗಬಾರದು

ಇತ್ತೀಚೆಗೆ (13.02.2026) ಬೆಂಗಳೂರಿನ ಆರು ಮಂದಿ ಎಳೆಯ ಗೆಳೆಯರು (ಎಲ್ಲರೂ 16 ರಿಂದ …

1 day ago

ವಿಕಸಿತ ಭಾರತಕ್ಕೆ ಕೃತಕ ಬುದ್ಧಿಮತ್ತೆ ಅಡಿಪಾಯ : ಉತ್ಪಾದಕತೆ ಹೆಚ್ಚಳಕ್ಕೆ AI ಸಹಕಾರಿ

ಕೃತಕ ಬುದ್ಧಿಮತ್ತೆ (AI) ವಿಕಸಿತ ಭಾರತದ ನಿರ್ಮಾಣಕ್ಕೆ ಅಡಿಪಾಯವಾಗಿದ್ದು, ಉತ್ಪಾದಕತೆ, ಸ್ಪರ್ಧಾತ್ಮಕತೆ ಹಾಗೂ…

1 day ago

ಸಫಾರಿ ಆರಂಭಿಸಲು ಮತ್ತೆ ಅನುಮತಿ | ಸಮಯ ಕಡಿತ, GPS-ಡ್ಯಾಶ್ ಕ್ಯಾಮ್ ಕಡ್ಡಾಯ – ಸಚಿವ ಈಶ್ವರ್ ಖಂಡ್ರೆ

ಬಂಡಿಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಸಫಾರಿಯನ್ನು ಮತ್ತೆ ಆರಂಭಿಸಲು ಅನುಮತಿ…

1 day ago