Advertisement
ಅಂಕಣ

ಕವನ | ಒಂದಿಷ್ಟು ಹೊತ್ತು ಕೇಳೆನ್ನ ಮಾತು…

Share

ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ

Advertisement
Advertisement

ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ

Advertisement

ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

20 ಕೃಷಿ ಉತ್ಪನ್ನಗಳ ರಫ್ತುಗಳಿಗೆ ಉತ್ತೇಜನ ನೀಡುವ ಯೋಜನೆ |

ಬಾಳೆಹಣ್ಣು, ಮಾವು, ಆಲೂಗಡ್ಡೆ ಮತ್ತು ಬೇಬಿ ಕಾರ್ನ್ ಸೇರಿದಂತೆ 20 ಕೃಷಿ ಉತ್ಪನ್ನಗಳ …

1 hour ago

Karnataka Weather | 27-04-2024 | ಮೋಡ- ಬಿಸಿಗಾಳಿ | ಮಳೆ ಸಾಧ್ಯತೆ ಕಡಿಮೆ |

ಈಗಿನಂತೆ ಎಪ್ರಿಲ್ 29 ಹಾಗೂ 30ರಂದು ಉತ್ತರ ಒಳನಾಡು, ದಕ್ಷಿಣ ಕರಾವಳಿ ಹಾಗೂ…

7 hours ago

ಕೋವಿ ಠೇವಣಾತಿ ಪ್ರಕರಣ | ಬೆಳ್ಳಾರೆ ಜಯಪ್ರಸಾದ್ ಜೋಶಿ ಹಾಗೂ ಇತರ 4 ರಿಟ್ ಅರ್ಜಿದಾರರ ಪರ ಹೈಕೋರ್ಟ್ ಆದೇಶ‌ |

ಚುನಾವಣಾ ಸಮಯದಲ್ಲಿ ಪರವಾನಿಗೆ ಹೊಂದಿದ ಶಸ್ತ್ರಾಸ್ತ್ರ ಠೇವಣಿ ವಿನಾಯಿತಿ ಕೋರಿ ಸಲ್ಲಿಸಿದ ಅರ್ಜಿಯನ್ನು…

8 hours ago

ಮಲೆನಾಡಗಿಡ್ಡ ಉಳಿಸುವ ಆಂದೋಲನಕ್ಕೆ ತೊಡಗುವ ಅನಿವಾರ್ಯತೆ ಇದೆ | ಯಾಕೆ ಗೊತ್ತಾ…?

ದೇಸೀ ಗೋವು ಅದರಲ್ಲೂ ಮಲೆನಾಡು ಗಿಡ್ಡ ತಳಿಯ ಹಸು ಉಳಿಯಬೇಕು, ಅದರ ಉಳಿವು…

2 days ago

ಏರಿದ ತಾಪಮಾನ | ರಾಜ್ಯದಲ್ಲಿ ಮುಂದಿನ 5 ದಿನ ಬೀಸಲಿದೆ ಬಿಸಿಗಾಳಿ ಎಚ್ಚರಿಕೆ..!

ದಿನದಿಂದ ದಿನಕ್ಕೆ ತಾಪಮಾನ(Temperature) ಏರುತ್ತಿದೆ. ಬಿಸಿ ಗಾಳಿ(Heat wave) ಬೀಸುತ್ತಿದೆ. ನೀರಿಗೆ ಅಭಾವ(Water…

2 days ago

ನೆಲ್ಯಾಡಿ | ವಿಶ್ವವಿದ್ಯಾನಿಲಯ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಮಹಾಸಭೆ | ನೂತನ ಪದಾಧಿಕಾರಿಗಳ ನೇಮಕ

ವಿಶ್ವ ವಿದ್ಯಾಲಯ ಕಾಲೇಜು, ನೆಲ್ಯಾಡಿಯ ಶಿಕ್ಷಕ-ರಕ್ಷಕ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ…

2 days ago