ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ
ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ
ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ
# ಅಪೂರ್ವ ಚೇತನ್ ಪೆರಂದೋಡಿ
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…