ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ
ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ
ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ
# ಅಪೂರ್ವ ಚೇತನ್ ಪೆರಂದೋಡಿ
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…