ಮರಳಿನ ಮೇಲೆ ಬರೆದೆಯೊಂದು ಓಲೆ
ಅಳಿಸಿಬಿಟ್ಟಿತು ಅಪ್ಪಳಿಸಿದ ಅಲೆ
ಅಳಿಯದೇ ಉಳಿಯಿತು,ನೆನಪಿನ ಕಲೆ
ನಿನ್ನ ಜೊತೆ ಕಟ್ಟಿದೆ ನೂರಾರು ಕನಸು
ಇಂದೇಕೋ ಮುಳುವಾಯ್ತು ನನ್ನ ವಯಸ್ಸು
ಕ್ಷಣ ಮಾತ್ರದಲ್ಲಿ ಮುರಿದು ಬಿಟ್ಟೆ ನನ್ನ ಮನಸ್ಸು
ಕಾಲ ಸಾಗಿದೆ,ನೆನಪುಗಳು ಕಾಡುತಿದೆ
ಮನಸ್ಸು ಮರಳಿ ಸಾಮಿಪ್ಯ ಬೇಡುತಿದೆ
ಕಣ್ಣ ರೆಪ್ಪೆಗಳು ಮುಚ್ಚದೇ ಕಾಯುತಿದೆ
ನೀನಾಗಿದ್ದೆ ನನಗೆ ಸಂಗೀತ ರಾಗ
ಕೊಟ್ಟುಬಿಟ್ಟಿದ್ದೆ ನಿನಗೆ ನನ್ನೆದೆಯ ಜಾಗ
ಇಂದು ಭಾದಿಸುತಿದೆ ನಿನ್ನ ನೆನಪಿನ ರೋಗ
ಕಳೆದು ಹೋದೆ ನಾನು ನಿನ್ನೊಳಗೆ
ತಿಳಿಯದೇ ಮರೆಯಾದೆ ನಾ ನನ್ನೊಳಗೆ
ಮರೆಯಾಗಿದೆ ನಿನ್ನನಗಲಿ ನನ್ನ ಮುಗುಳ್ನಗೆ
ಸಾಕಾಯ್ತು ನನಗೆ ನೆನಪುಗಳೊಡನೆ ಹೋರಾಟ
ಮುಗಿಯುವುದೆಂದೋ ನಾ ಕಾಣೆ ಈ ಸಂಕಟ
ಆದಷ್ಟು ಬೇಗ ಕೊನೆಗಾಣಬೇಕಿದೆ ಈ ಪರದಾಟ
# ಅಪೂರ್ವ ಚೇತನ್ ಪೆರಂದೋಡಿ
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…