ಕೋಟಿ ಹೃದಯ ಗೆದ್ದ ಕುವರ, ಆಗಿಹೋದ ಇಂದು ಅಮರ…
ಹೇಳು ವಿಧಿಯೇ ನೀ ಯಾಕಿಷ್ಟು ಕ್ರೂರಿ…
ಕೋಟಿ ಜನರ ಜನಮಾನಸದಲ್ಲಿ ಅಚ್ಚಳಿಯದ ನೆನಪು “ಅಪ್ಪು”…
ಇನ್ನೆಂದಿಗೂ ಬಾರದ ಲೋಕ ಸೇರಿಬಿಟ್ಟೆಯಾ, ನೀ ಸೇರಿಬಿಟ್ಟೆಯಾ…?
ಕೋಟಿ ಜನರ ಪ್ರಾರ್ಥನೆಯೂ ಫಲಿಸದೇ ಹೋಯಿತು ಇಂದು…
ನಿಮ್ಮ ನಿಷ್ಕಲ್ಮಶ ಮನಸ್ಸು ದೇವರಿಗೂ ಇಷ್ಟವಾಗಿ ಕರೆಸಿ ಬಿಟ್ಟನೇ ನಿಮ್ಮ ತನ್ನ ಬಳಿ, ಆ ಪರಮಾತ್ಮನ ಬಳಿ…
ಸಾವಿರಾರು ಜನರ ಬದುಕಿಗೆ ಬೆಳಕಾದ ನಿಮ್ಮ ಬದುಕು ಅಂತ್ಯವಾಯಿತೇ, ಇಲ್ಲಿಗೆ ಕೊನೆಯಾಯಿತೇ…?
ನಿಮ್ಮ ಬದುಕ ಯಾತ್ರೆಯು ಇಂದು ಕೊನೆಯಾಯಿತೇ, ಇಲ್ಲಿಗೆ ಮುಗಿದು ಹೋಯಿತೇ…?
ಹಾಡುತಿದ್ದ ನಿಮ್ಮ ಸ್ವರವು ಮೌನವಾಗಿದೆ, ಇಂದು ಮೌನವಾಗಿದೆ…
ಕುಣಿಯುತ್ತಿದ್ದ ನಿಮ್ಮ ಕೈ-ಕಾಲುಗಳು ನಿಂತುಹೋಗಿವೆ, ಇಂದು ನಿಂತು ಹೋಗಿವೆ…
ನಿಮ್ಮ ಬದುಕ ಯಾತ್ರೆಯು ಇಂದು ಮುಗಿದು ಹೋಯಿತೇ, ಇಲ್ಲಿಗೆ ಕೊನೆಯಾಯಿತೇ…?
ನೀವು ಇಂದು ಇಲ್ಲದೇ ಹೋದರೂ, ನಿಮ್ಮ ನೆನಪುಗಳೆಲ್ಲಾ ಉಳಿದು ಹೋಗಿವೆ, ನಮ್ಮ ಮನದಲ್ಲಿ ಅಚ್ಚಳಿಯದೇ ಉಳಿದುಹೋಗಿವೆ…
ನಿಮ್ಮ ಬದುಕ ಸಾಧನೆಯೆಲ್ಲಾ ನಮಗೆ ದಾರಿದೀಪವಾಗಿ, ನಿಮ್ಮ ಪ್ರತಿಯೊಂದು ಹೆಜ್ಜೆ ನಮ್ಮ ಬದುಕಿಗೆ ಸ್ಪೂರ್ತಿಯಾಗಿ ಕಾಣುವುದು, ನಮ್ಮ ಮುನ್ನಡೆಸುವುದು…
ಇಂದು ನೀವು ಇಲ್ಲದೇ ಹೋದರೂ, ನಿಮ್ಮ ನೆನಪುಗಳೆಲ್ಲಾ ನಮ್ಮ ಮನದಲ್ಲಿ ಉಳಿದುಹೋಗಿವೆ, ಅಚ್ಚಾಗಿ ಉಳಿದು ಹೋಗಿವೆ…
ಮುಂದಿನ ಜನ್ಮದಲ್ಲಿ ನೀವು ಇದೇ ಕರುನಾಡಿನಲ್ಲಿ ವೀರ ಕನ್ನಡಿಗನಾಗಿ ಹುಟ್ಟಿ ಬನ್ನಿ, ಮತ್ತೊಮ್ಮೆ ಹುಟ್ಟಿ ಬನ್ನಿ…
ಆ ಪರಮಾತ್ಮನು ನಿಮ್ಮ ಆತ್ಮಕ್ಕೆ ಶಾಂತಿಯನ್ನು ನೀಡಲೆಂದು ನಿಮಗೆ ನಾವು ದುಃಖದ ವಿದಾಯ ಹೇಳುತಿರುವೆವು, ನಾವು ಹೇಳುತಿರುವೆವು…
ಕೋಟಿ ಹೃದಯ ಗೆದ್ದ ಕುವರ, ಆಗಿಹೋದ ಇಂದು ಅಮರ…
ಹೇಳು ವಿದಿಯೇ ನೀನು ಯಾಕಿಷ್ಟು ಕ್ರೂರಿ…
ಕೋಟಿ ಜನರ ಪ್ರಾರ್ಥನೆಯು ಫಲಿಸದೇ ಹೋಯಿತು ಇಂದು…
ನಿಮ್ಮ ಬದುಕ ಯಾತ್ರೆಯು ಇಲ್ಲಿಗೆ ಮುಗಿದು ಹೋಯಿತು, ಇಂದು ಕೊನೆಯಾಯಿತು…
ನೀವು ಮತ್ತೆ ಹುಟ್ಟಿ ಬನ್ನಿ ನಮ್ಮ ಕರುನಾಡಿನ ಮನೆ ಮಗನಾಗಿ ಎಂದು ನಾವು ಬೇಡುತ್ತಾ ನಿಮ್ಮ ಆತ್ಮಕ್ಕೆ ಶಾಂತಿ ಕೋರುತ್ತಿರುವೆವು, ನಾವು ಕೋರುತ್ತಿರುವೆವು…
# ಉಲ್ಲಾಸ್ ಕಜ್ಜೋಡಿ
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…