ಅನುಕ್ರಮ

ಕವನ | ಕರುನಾಡಿನ ರಾಜಕುಮಾರ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕೋಟಿ ಹೃದಯ ಗೆದ್ದ ಕುವರ, ಆಗಿಹೋದ ಇಂದು ಅಮರ…
ಹೇಳು ವಿಧಿಯೇ ನೀ ಯಾಕಿಷ್ಟು ಕ್ರೂರಿ…
ಕೋಟಿ ಜನರ ಜನಮಾನಸದಲ್ಲಿ ಅಚ್ಚಳಿಯದ ನೆನಪು “ಅಪ್ಪು”…
ಇನ್ನೆಂದಿಗೂ ಬಾರದ ಲೋಕ ಸೇರಿಬಿಟ್ಟೆಯಾ, ನೀ ಸೇರಿಬಿಟ್ಟೆಯಾ…?

Advertisement

ಕೋಟಿ ಜನರ ಪ್ರಾರ್ಥನೆಯೂ ಫಲಿಸದೇ ಹೋಯಿತು ಇಂದು…
ನಿಮ್ಮ ನಿಷ್ಕಲ್ಮಶ ಮನಸ್ಸು ದೇವರಿಗೂ ಇಷ್ಟವಾಗಿ ಕರೆಸಿ ಬಿಟ್ಟನೇ ನಿಮ್ಮ ತನ್ನ ಬಳಿ, ಆ ಪರಮಾತ್ಮನ ಬಳಿ…
ಸಾವಿರಾರು ಜನರ ಬದುಕಿಗೆ ಬೆಳಕಾದ ನಿಮ್ಮ ಬದುಕು ಅಂತ್ಯವಾಯಿತೇ, ಇಲ್ಲಿಗೆ ಕೊನೆಯಾಯಿತೇ…?
ನಿಮ್ಮ ಬದುಕ ಯಾತ್ರೆಯು ಇಂದು ಕೊನೆಯಾಯಿತೇ, ಇಲ್ಲಿಗೆ ಮುಗಿದು ಹೋಯಿತೇ…?

ಹಾಡುತಿದ್ದ ನಿಮ್ಮ ಸ್ವರವು ಮೌನವಾಗಿದೆ, ಇಂದು ಮೌನವಾಗಿದೆ…
ಕುಣಿಯುತ್ತಿದ್ದ ನಿಮ್ಮ ಕೈ-ಕಾಲುಗಳು ನಿಂತುಹೋಗಿವೆ, ಇಂದು ನಿಂತು ಹೋಗಿವೆ…
ನಿಮ್ಮ ಬದುಕ ಯಾತ್ರೆಯು ಇಂದು ಮುಗಿದು ಹೋಯಿತೇ, ಇಲ್ಲಿಗೆ ಕೊನೆಯಾಯಿತೇ…?
ನೀವು ಇಂದು ಇಲ್ಲದೇ ಹೋದರೂ, ನಿಮ್ಮ ನೆನಪುಗಳೆಲ್ಲಾ ಉಳಿದು ಹೋಗಿವೆ, ನಮ್ಮ ಮನದಲ್ಲಿ ಅಚ್ಚಳಿಯದೇ ಉಳಿದುಹೋಗಿವೆ…

ನಿಮ್ಮ ಬದುಕ ಸಾಧನೆಯೆಲ್ಲಾ ನಮಗೆ ದಾರಿದೀಪವಾಗಿ, ನಿಮ್ಮ ಪ್ರತಿಯೊಂದು ಹೆಜ್ಜೆ ನಮ್ಮ ಬದುಕಿಗೆ ಸ್ಪೂರ್ತಿಯಾಗಿ ಕಾಣುವುದು, ನಮ್ಮ ಮುನ್ನಡೆಸುವುದು…
ಇಂದು ನೀವು ಇಲ್ಲದೇ ಹೋದರೂ, ನಿಮ್ಮ ನೆನಪುಗಳೆಲ್ಲಾ ನಮ್ಮ ಮನದಲ್ಲಿ ಉಳಿದುಹೋಗಿವೆ, ಅಚ್ಚಾಗಿ ಉಳಿದು ಹೋಗಿವೆ…
ಮುಂದಿನ ಜನ್ಮದಲ್ಲಿ ನೀವು ಇದೇ ಕರುನಾಡಿನಲ್ಲಿ ವೀರ ಕನ್ನಡಿಗನಾಗಿ ಹುಟ್ಟಿ ಬನ್ನಿ, ಮತ್ತೊಮ್ಮೆ ಹುಟ್ಟಿ ಬನ್ನಿ…
ಆ ಪರಮಾತ್ಮನು ನಿಮ್ಮ ಆತ್ಮಕ್ಕೆ ಶಾಂತಿಯನ್ನು ನೀಡಲೆಂದು ನಿಮಗೆ ನಾವು ದುಃಖದ ವಿದಾಯ ಹೇಳುತಿರುವೆವು, ನಾವು ಹೇಳುತಿರುವೆವು…

Advertisement

ಕೋಟಿ ಹೃದಯ ಗೆದ್ದ ಕುವರ, ಆಗಿಹೋದ ಇಂದು ಅಮರ…
ಹೇಳು ವಿದಿಯೇ ನೀನು ಯಾಕಿಷ್ಟು ಕ್ರೂರಿ…
ಕೋಟಿ ಜನರ ಪ್ರಾರ್ಥನೆಯು ಫಲಿಸದೇ ಹೋಯಿತು ಇಂದು…
ನಿಮ್ಮ ಬದುಕ ಯಾತ್ರೆಯು ಇಲ್ಲಿಗೆ ಮುಗಿದು ಹೋಯಿತು, ಇಂದು ಕೊನೆಯಾಯಿತು…
ನೀವು ಮತ್ತೆ ಹುಟ್ಟಿ ಬನ್ನಿ ನಮ್ಮ ಕರುನಾಡಿನ ಮನೆ ಮಗನಾಗಿ ಎಂದು ನಾವು ಬೇಡುತ್ತಾ ನಿಮ್ಮ ಆತ್ಮಕ್ಕೆ ಶಾಂತಿ ಕೋರುತ್ತಿರುವೆವು, ನಾವು ಕೋರುತ್ತಿರುವೆವು…

Advertisement

# ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹೊಸರುಚಿ | ಹಲಸಿನ ಹಣ್ಣಿನ ಬಜ್ಜಿ

ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ :  ಹಲಸಿನ…

2 hours ago

ಎತ್ತಿನಹೊಳೆ ಯೋಜನೆಯಡಿ ವಿವಿಧ ಜಿಲ್ಲೆಗಳಿಗೆ ನೀರು ತುಂಬಿಸುವ ಚಿಂತನೆ

ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…

2 hours ago

ದೇಶದ ಉತ್ಪನ್ನಗಳನ್ನು ಬಳಸಲು ರೈತರ ಸಂಕಲ್ಪ

ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…

2 hours ago

ಹವಾಮಾನ ವರದಿ | 15-08-2025 | ಸದ್ಯ ಸಾಮಾನ್ಯ ಮಳೆ, ಆ.20 ರ ನಂತರ ಮಳೆ ಕಡಿಮೆ

ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…

23 hours ago

ಗ್ರಾಮೀಣ ಆರ್ಥಿಕತೆಯ “ಸಹಕಾರಿ” ಸಂಘದ “ಮಾದರಿ” ಗುಟ್ಟು…!

ಗ್ರಾಮೀಣ ಮಟ್ಟದ ಆರ್ಥಿಕ‌ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…

1 day ago

ಶೀಘ್ರದಲ್ಲೇ ಜಿಲ್ಲಾ, ತಾಲೂಕು ಪಂಚಾಯತಿಗಳಿಗೆ ಚುನಾವಣೆ

ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

1 day ago