Advertisement
ಅನುಕ್ರಮ

ಕವನ | ಕರುನಾಡಿನ ರಾಜಕುಮಾರ

Share

ಕೋಟಿ ಹೃದಯ ಗೆದ್ದ ಕುವರ, ಆಗಿಹೋದ ಇಂದು ಅಮರ…
ಹೇಳು ವಿಧಿಯೇ ನೀ ಯಾಕಿಷ್ಟು ಕ್ರೂರಿ…
ಕೋಟಿ ಜನರ ಜನಮಾನಸದಲ್ಲಿ ಅಚ್ಚಳಿಯದ ನೆನಪು “ಅಪ್ಪು”…
ಇನ್ನೆಂದಿಗೂ ಬಾರದ ಲೋಕ ಸೇರಿಬಿಟ್ಟೆಯಾ, ನೀ ಸೇರಿಬಿಟ್ಟೆಯಾ…?

ಕೋಟಿ ಜನರ ಪ್ರಾರ್ಥನೆಯೂ ಫಲಿಸದೇ ಹೋಯಿತು ಇಂದು…
ನಿಮ್ಮ ನಿಷ್ಕಲ್ಮಶ ಮನಸ್ಸು ದೇವರಿಗೂ ಇಷ್ಟವಾಗಿ ಕರೆಸಿ ಬಿಟ್ಟನೇ ನಿಮ್ಮ ತನ್ನ ಬಳಿ, ಆ ಪರಮಾತ್ಮನ ಬಳಿ…
ಸಾವಿರಾರು ಜನರ ಬದುಕಿಗೆ ಬೆಳಕಾದ ನಿಮ್ಮ ಬದುಕು ಅಂತ್ಯವಾಯಿತೇ, ಇಲ್ಲಿಗೆ ಕೊನೆಯಾಯಿತೇ…?
ನಿಮ್ಮ ಬದುಕ ಯಾತ್ರೆಯು ಇಂದು ಕೊನೆಯಾಯಿತೇ, ಇಲ್ಲಿಗೆ ಮುಗಿದು ಹೋಯಿತೇ…?

ಹಾಡುತಿದ್ದ ನಿಮ್ಮ ಸ್ವರವು ಮೌನವಾಗಿದೆ, ಇಂದು ಮೌನವಾಗಿದೆ…
ಕುಣಿಯುತ್ತಿದ್ದ ನಿಮ್ಮ ಕೈ-ಕಾಲುಗಳು ನಿಂತುಹೋಗಿವೆ, ಇಂದು ನಿಂತು ಹೋಗಿವೆ…
ನಿಮ್ಮ ಬದುಕ ಯಾತ್ರೆಯು ಇಂದು ಮುಗಿದು ಹೋಯಿತೇ, ಇಲ್ಲಿಗೆ ಕೊನೆಯಾಯಿತೇ…?
ನೀವು ಇಂದು ಇಲ್ಲದೇ ಹೋದರೂ, ನಿಮ್ಮ ನೆನಪುಗಳೆಲ್ಲಾ ಉಳಿದು ಹೋಗಿವೆ, ನಮ್ಮ ಮನದಲ್ಲಿ ಅಚ್ಚಳಿಯದೇ ಉಳಿದುಹೋಗಿವೆ…

ನಿಮ್ಮ ಬದುಕ ಸಾಧನೆಯೆಲ್ಲಾ ನಮಗೆ ದಾರಿದೀಪವಾಗಿ, ನಿಮ್ಮ ಪ್ರತಿಯೊಂದು ಹೆಜ್ಜೆ ನಮ್ಮ ಬದುಕಿಗೆ ಸ್ಪೂರ್ತಿಯಾಗಿ ಕಾಣುವುದು, ನಮ್ಮ ಮುನ್ನಡೆಸುವುದು…
ಇಂದು ನೀವು ಇಲ್ಲದೇ ಹೋದರೂ, ನಿಮ್ಮ ನೆನಪುಗಳೆಲ್ಲಾ ನಮ್ಮ ಮನದಲ್ಲಿ ಉಳಿದುಹೋಗಿವೆ, ಅಚ್ಚಾಗಿ ಉಳಿದು ಹೋಗಿವೆ…
ಮುಂದಿನ ಜನ್ಮದಲ್ಲಿ ನೀವು ಇದೇ ಕರುನಾಡಿನಲ್ಲಿ ವೀರ ಕನ್ನಡಿಗನಾಗಿ ಹುಟ್ಟಿ ಬನ್ನಿ, ಮತ್ತೊಮ್ಮೆ ಹುಟ್ಟಿ ಬನ್ನಿ…
ಆ ಪರಮಾತ್ಮನು ನಿಮ್ಮ ಆತ್ಮಕ್ಕೆ ಶಾಂತಿಯನ್ನು ನೀಡಲೆಂದು ನಿಮಗೆ ನಾವು ದುಃಖದ ವಿದಾಯ ಹೇಳುತಿರುವೆವು, ನಾವು ಹೇಳುತಿರುವೆವು…

ಕೋಟಿ ಹೃದಯ ಗೆದ್ದ ಕುವರ, ಆಗಿಹೋದ ಇಂದು ಅಮರ…
ಹೇಳು ವಿದಿಯೇ ನೀನು ಯಾಕಿಷ್ಟು ಕ್ರೂರಿ…
ಕೋಟಿ ಜನರ ಪ್ರಾರ್ಥನೆಯು ಫಲಿಸದೇ ಹೋಯಿತು ಇಂದು…
ನಿಮ್ಮ ಬದುಕ ಯಾತ್ರೆಯು ಇಲ್ಲಿಗೆ ಮುಗಿದು ಹೋಯಿತು, ಇಂದು ಕೊನೆಯಾಯಿತು…
ನೀವು ಮತ್ತೆ ಹುಟ್ಟಿ ಬನ್ನಿ ನಮ್ಮ ಕರುನಾಡಿನ ಮನೆ ಮಗನಾಗಿ ಎಂದು ನಾವು ಬೇಡುತ್ತಾ ನಿಮ್ಮ ಆತ್ಮಕ್ಕೆ ಶಾಂತಿ ಕೋರುತ್ತಿರುವೆವು, ನಾವು ಕೋರುತ್ತಿರುವೆವು…

# ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸಮಯ ತಪ್ಪಿ ತಿಂದ ಆಹಾರವೇ ವಿಷವಾಗಬಹುದು – ರಾಘವೇಶ್ವರ ಶ್ರೀ

ಹಿತವಾದ ಆಹಾರವನ್ನು ಮಿತ ಪ್ರಮಾಣದಲ್ಲಿ ಮತ್ತು ಸಕಾಲದಲ್ಲಿ ಸೇವಿಸುವುದು ಆರೋಗ್ಯಕರ ಜೀವನದ ಮೂಲಮಂತ್ರ…

9 minutes ago

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

1 hour ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

3 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

4 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

11 hours ago