ಕವನ | ಬದುಕು ಮತ್ತು ಸಾವು

November 14, 2021
11:30 AM

ಹುಟ್ಟಿದಾಗ ದೃಷ್ಟಿ ಕಳೆದುಕೊಂಡಾತ
ಜಗತ್ತನ್ನು ಕಾಣಲಾಗಲಿಲ್ಲವೆಂದು,
ಬದುಕನ್ನು ಕಳೆದುಕೊಂಡಿದ್ದರೆ
ಜಗದಲ್ಲಿ ಕುರುಡರೇ
ಕಾಣಸಿಗುತ್ತಿರಲಿಲ್ಲ….!

ಕಿವಿಗಳಿಲ್ಲದವರು ತನ್ನವರ
ನುಡಿಗಳ ಕೇಳಿಸಿಕೊಳ್ಳಲಾಗುತ್ತಿಲ್ಲವೆಂದು
ಬದುಕಿಗೆ ಅಂತ್ಯವಿಡುತ್ತಿದ್ದರೆ
ಇಂದು ಕಿವುಡರೇ
ಕಾಣ ಸಿಗುತ್ತಿರಲಿಲ್ಲ…..!

ಪ್ರೀತಿ ಸಿಗದೇ ಇದ್ದವರೆಲ್ಲಾ,
ತಮ್ಮ ಬದುಕನ್ನು
ಅಂತ್ಯಗಾಣಿಸುತ್ತಿದ್ದರೆ,
ಅನಾಥವೆಂಬ ಪದಕೆ
ಅರ್ಥವೇ ಇರುತ್ತಿರಲಿಲ್ಲ…!

ಕಷ್ಟಕ್ಕೆ ಹೆದರಿ ಎಲ್ಲರೂ
ಬದುಕನ್ನು ಕಳೆದುಕೊಂಡಿದ್ದರೆ
ಬದುಕಿನ ಸುಂದರ ಕ್ಷಣಗಳ
ಯಾರು ಅನುಭವಿಸುತ್ತಿರಲಿಲ್ಲ..!

ಕಷ್ಟಗಳ ಬದುಕಿನ ದಾರಿಯಾಗಿಸಬೇಕು
ನೋವುಗಳನ್ನೇ ಬದುಕಿನ ಬೆಳಕಾಗಿಸಬೇಕು
ಬದುಕಿ ಏನನ್ನೂ ಸಾಧಿಸಲಾಗಲಿಲ್ಲವೆಂದ ಮೇಲೆ,
ಸತ್ತು ಸಾಧಿಸುವುದೇನಿದೆ….?

#ಅಪೂರ್ವ ಕೊಲ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

ಇದನ್ನೂ ಓದಿ

ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್
ಮಲೆನಾಡಿನ ಸಂಕಷ್ಟವೇ ಅವಕಾಶವಾಗಬಹುದೇ? : ‘ನಿರಪೇಕ್ಷಿತ ಕಾಡು ಕೃಷಿ’ ಹೊಸ ಪರಿಕಲ್ಪನೆ
June 5, 2026
8:20 PM
by: ಪ್ರಬಂಧ ಅಂಬುತೀರ್ಥ
ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?
May 23, 2026
7:12 AM
by: ಡಾ.ಆದಿತ್ಯ ಭಟ್‌, ಚಣಿಲ, BHMS

You cannot copy content of this page - Copyright -The Rural Mirror