ಹುಟ್ಟಿದಾಗ ದೃಷ್ಟಿ ಕಳೆದುಕೊಂಡಾತ
ಜಗತ್ತನ್ನು ಕಾಣಲಾಗಲಿಲ್ಲವೆಂದು,
ಬದುಕನ್ನು ಕಳೆದುಕೊಂಡಿದ್ದರೆ
ಜಗದಲ್ಲಿ ಕುರುಡರೇ
ಕಾಣಸಿಗುತ್ತಿರಲಿಲ್ಲ….!
ಕಿವಿಗಳಿಲ್ಲದವರು ತನ್ನವರ
ನುಡಿಗಳ ಕೇಳಿಸಿಕೊಳ್ಳಲಾಗುತ್ತಿಲ್ಲವೆಂದು
ಬದುಕಿಗೆ ಅಂತ್ಯವಿಡುತ್ತಿದ್ದರೆ
ಇಂದು ಕಿವುಡರೇ
ಕಾಣ ಸಿಗುತ್ತಿರಲಿಲ್ಲ…..!
ಪ್ರೀತಿ ಸಿಗದೇ ಇದ್ದವರೆಲ್ಲಾ,
ತಮ್ಮ ಬದುಕನ್ನು
ಅಂತ್ಯಗಾಣಿಸುತ್ತಿದ್ದರೆ,
ಅನಾಥವೆಂಬ ಪದಕೆ
ಅರ್ಥವೇ ಇರುತ್ತಿರಲಿಲ್ಲ…!
ಕಷ್ಟಕ್ಕೆ ಹೆದರಿ ಎಲ್ಲರೂ
ಬದುಕನ್ನು ಕಳೆದುಕೊಂಡಿದ್ದರೆ
ಬದುಕಿನ ಸುಂದರ ಕ್ಷಣಗಳ
ಯಾರು ಅನುಭವಿಸುತ್ತಿರಲಿಲ್ಲ..!
ಕಷ್ಟಗಳ ಬದುಕಿನ ದಾರಿಯಾಗಿಸಬೇಕು
ನೋವುಗಳನ್ನೇ ಬದುಕಿನ ಬೆಳಕಾಗಿಸಬೇಕು
ಬದುಕಿ ಏನನ್ನೂ ಸಾಧಿಸಲಾಗಲಿಲ್ಲವೆಂದ ಮೇಲೆ,
ಸತ್ತು ಸಾಧಿಸುವುದೇನಿದೆ….?
#ಅಪೂರ್ವ ಕೊಲ್ಯ
16.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ ಯೋಗೇಶ್ ತೋರಿಸಿಕೊಟ್ಟಿದ್ದಾರೆ.…
ನುಡಿದಂತೆ ನಡೆದಾತ ‘ರಾಜಾ ಹರಿಶ್ಚಂದ್ರ’. ಸತ್ಯಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ತ್ಯಾಗಿ. ಅನೃತವನ್ನಾಡದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…
ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…