Advertisement
ಅನುಕ್ರಮ

ಕವನ | ಬದುಕು ಮತ್ತು ಸಾವು

Share

ಹುಟ್ಟಿದಾಗ ದೃಷ್ಟಿ ಕಳೆದುಕೊಂಡಾತ
ಜಗತ್ತನ್ನು ಕಾಣಲಾಗಲಿಲ್ಲವೆಂದು,
ಬದುಕನ್ನು ಕಳೆದುಕೊಂಡಿದ್ದರೆ
ಜಗದಲ್ಲಿ ಕುರುಡರೇ
ಕಾಣಸಿಗುತ್ತಿರಲಿಲ್ಲ….!

ಕಿವಿಗಳಿಲ್ಲದವರು ತನ್ನವರ
ನುಡಿಗಳ ಕೇಳಿಸಿಕೊಳ್ಳಲಾಗುತ್ತಿಲ್ಲವೆಂದು
ಬದುಕಿಗೆ ಅಂತ್ಯವಿಡುತ್ತಿದ್ದರೆ
ಇಂದು ಕಿವುಡರೇ
ಕಾಣ ಸಿಗುತ್ತಿರಲಿಲ್ಲ…..!

ಪ್ರೀತಿ ಸಿಗದೇ ಇದ್ದವರೆಲ್ಲಾ,
ತಮ್ಮ ಬದುಕನ್ನು
ಅಂತ್ಯಗಾಣಿಸುತ್ತಿದ್ದರೆ,
ಅನಾಥವೆಂಬ ಪದಕೆ
ಅರ್ಥವೇ ಇರುತ್ತಿರಲಿಲ್ಲ…!

ಕಷ್ಟಕ್ಕೆ ಹೆದರಿ ಎಲ್ಲರೂ
ಬದುಕನ್ನು ಕಳೆದುಕೊಂಡಿದ್ದರೆ
ಬದುಕಿನ ಸುಂದರ ಕ್ಷಣಗಳ
ಯಾರು ಅನುಭವಿಸುತ್ತಿರಲಿಲ್ಲ..!

ಕಷ್ಟಗಳ ಬದುಕಿನ ದಾರಿಯಾಗಿಸಬೇಕು
ನೋವುಗಳನ್ನೇ ಬದುಕಿನ ಬೆಳಕಾಗಿಸಬೇಕು
ಬದುಕಿ ಏನನ್ನೂ ಸಾಧಿಸಲಾಗಲಿಲ್ಲವೆಂದ ಮೇಲೆ,
ಸತ್ತು ಸಾಧಿಸುವುದೇನಿದೆ….?

#ಅಪೂರ್ವ ಕೊಲ್ಯ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

5 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

5 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

5 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

16 hours ago