Advertisement
ಅನುಕ್ರಮ

ಕವನ | ಬದುಕು ಮತ್ತು ಸಾವು

Share

ಹುಟ್ಟಿದಾಗ ದೃಷ್ಟಿ ಕಳೆದುಕೊಂಡಾತ
ಜಗತ್ತನ್ನು ಕಾಣಲಾಗಲಿಲ್ಲವೆಂದು,
ಬದುಕನ್ನು ಕಳೆದುಕೊಂಡಿದ್ದರೆ
ಜಗದಲ್ಲಿ ಕುರುಡರೇ
ಕಾಣಸಿಗುತ್ತಿರಲಿಲ್ಲ….!

ಕಿವಿಗಳಿಲ್ಲದವರು ತನ್ನವರ
ನುಡಿಗಳ ಕೇಳಿಸಿಕೊಳ್ಳಲಾಗುತ್ತಿಲ್ಲವೆಂದು
ಬದುಕಿಗೆ ಅಂತ್ಯವಿಡುತ್ತಿದ್ದರೆ
ಇಂದು ಕಿವುಡರೇ
ಕಾಣ ಸಿಗುತ್ತಿರಲಿಲ್ಲ…..!

ಪ್ರೀತಿ ಸಿಗದೇ ಇದ್ದವರೆಲ್ಲಾ,
ತಮ್ಮ ಬದುಕನ್ನು
ಅಂತ್ಯಗಾಣಿಸುತ್ತಿದ್ದರೆ,
ಅನಾಥವೆಂಬ ಪದಕೆ
ಅರ್ಥವೇ ಇರುತ್ತಿರಲಿಲ್ಲ…!

ಕಷ್ಟಕ್ಕೆ ಹೆದರಿ ಎಲ್ಲರೂ
ಬದುಕನ್ನು ಕಳೆದುಕೊಂಡಿದ್ದರೆ
ಬದುಕಿನ ಸುಂದರ ಕ್ಷಣಗಳ
ಯಾರು ಅನುಭವಿಸುತ್ತಿರಲಿಲ್ಲ..!

ಕಷ್ಟಗಳ ಬದುಕಿನ ದಾರಿಯಾಗಿಸಬೇಕು
ನೋವುಗಳನ್ನೇ ಬದುಕಿನ ಬೆಳಕಾಗಿಸಬೇಕು
ಬದುಕಿ ಏನನ್ನೂ ಸಾಧಿಸಲಾಗಲಿಲ್ಲವೆಂದ ಮೇಲೆ,
ಸತ್ತು ಸಾಧಿಸುವುದೇನಿದೆ….?

#ಅಪೂರ್ವ ಕೊಲ್ಯ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

6 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

16 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

23 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

23 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

1 day ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

1 day ago