ಕವನ | ಸೋಲು-ಗೆಲುವಿನ ಬದುಕು

November 27, 2021
10:11 PM

ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…

ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…

ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…

ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…

ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

 # ಉಲ್ಲಾಸ್ ಕಜ್ಜೋಡಿ

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಕೊಡದಿದ್ದರೆ ಏನು ಮಾಡುವುದು..?
January 15, 2025
6:35 AM
by: ದ ರೂರಲ್ ಮಿರರ್.ಕಾಂ
ಸಂಸ್ಕೃತ ಕೈಬಿಟ್ಟರೆ ಕನ್ನಡಕ್ಕೇ ನಷ್ಟ  | ಹಿರಿಯ ಸಾಹಿತಿ ಡಾ. ಎಸ್.ಎಲ್.ಭೈರಪ್ಪ ಅಭಿಪ್ರಾಯ
January 12, 2025
9:20 PM
by: The Rural Mirror ಸುದ್ದಿಜಾಲ
ಡಿ.31 ರಂದು ವಳಲಂಬೆಯಲ್ಲಿ ಯಕ್ಷಗಾನ | ಕಲಾವಿದ ಸಿದ್ದಕಟ್ಟೆ ಸದಾಶಿವ ಶೆಟ್ಟಿಗಾರ್ ಅವರಿಗೆ ಗೌರವಾರ್ಪಣೆ |
December 28, 2024
7:25 AM
by: ದ ರೂರಲ್ ಮಿರರ್.ಕಾಂ
ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |
December 9, 2024
6:47 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror