Advertisement
ಸಾಹಿತ್ಯ

ಕವನ | ಸೋಲು-ಗೆಲುವಿನ ಬದುಕು

Share

ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…

ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…

ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…

ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…

ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

 # ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

6 hours ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

11 hours ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

15 hours ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

19 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

2 days ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

2 days ago