ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…
ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…
ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…
ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…
ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
# ಉಲ್ಲಾಸ್ ಕಜ್ಜೋಡಿ
ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…
ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…
ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…
ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…
ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…
ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…