ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…
ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…
ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…
ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…
ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
# ಉಲ್ಲಾಸ್ ಕಜ್ಜೋಡಿ
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…
ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…
ಕೊಡಗಿನಲ್ಲಿ ಕಾಡಾನೆ ದಾಳಿಗೆ ಕಾಫಿ ತೋಟದ ಮಾಲೀಕ ಗಣಪತಿ ಮೃತಪಟ್ಟಿದ್ದಾರೆ. ಕಾಡಾನೆ ಹಾವಳಿ…
ಹಾಲಿನ ಗುಣಮಟ್ಟ ಕಾಪಾಡಲು ಸಹಕಾರ ಸಂಘಗಳಿಗೆ ವಿಶೇಷ ಕಲಬೆರಕೆ ಪತ್ತೆ ಕಿಟ್ಗಳನ್ನು ವಿತರಿಸಲಾಗುತ್ತಿದೆ.
ಸೌದೆ ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆ ಅಕ್ರಮ ಮರ ಕಡಿತಲೆ ತಡೆಯಲು ಸಚಿವ ಈಶ್ವರ…
ಕೃಷಿಯ ಮೂಲಕ ಕೇವಲ ಆಹಾರ ಉತ್ಪಾದನೆ ಹೆಚ್ಚಿಸುವುದಕ್ಕಿಂತ ಸಮಾನ ವಿತರಣೆ, ಪರಿಸರ ಸಂರಕ್ಷಣೆ…