Advertisement
ಸಾಹಿತ್ಯ

ಕವನ | ಸೋಲು-ಗೆಲುವಿನ ಬದುಕು

Share

ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…

ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…

ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…

ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…

ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…

 # ಉಲ್ಲಾಸ್ ಕಜ್ಜೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ

ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…

2 hours ago

ಹವಾಮಾನ ವರದಿ | 17-05-2026 | ಮೇ 19 ರಿಂದ ಹವಾಮಾನದಲ್ಲಿ ದೊಡ್ಡ ಬದಲಾವಣೆ ಸಾಧ್ಯ..!

ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…

4 hours ago

ಹೆದ್ದಾರಿಯಲ್ಲಿ ಖಾಸಗಿ ಬಸ್‌ಗಳ ‘ಲೈಟ್‌ ಅಬ್ಬರ’…! ಬೆಂಕಿಗಾಹುತಿಯಾದ ಬಸ್‌ ಘಟನೆ ಮತ್ತೆ ಎಚ್ಚರಿಸಿದ ಅಪಾಯದ ಗಂಟೆ..!

ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್‌ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…

8 hours ago

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು

ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್‌, AI ಹಾಗೂ ಸ್ಮಾರ್ಟ್…

9 hours ago

“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್

ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…

18 hours ago

ಉತ್ತರ ಪ್ರದೇಶದಲ್ಲಿ ಭೀಕರ ಚಂಡಮಾರುತ – 142 ಕ್ಕೂ ಹೆಚ್ಚು ಮಂದಿ ಬಲಿ…! ಈ ದುರಂತಕ್ಕೆ ಕಾರಣವೇನು?

ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…

18 hours ago