ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…
ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…
ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…
ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…
ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
# ಉಲ್ಲಾಸ್ ಕಜ್ಜೋಡಿ
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…