ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…
ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…
ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…
ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…
ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
# ಉಲ್ಲಾಸ್ ಕಜ್ಜೋಡಿ
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…