ಮಾನವನಾಗಿ ಹುಟ್ಟಿದ ಮೇಲೆ ಸೋಲು ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
ನಿನ್ನಯ ಬದುಕನು ರೂಪಿಸೋ ಹೊಣೆಯು ನಿನ್ನದೇ ತಿಳಿಯೋ ಮನುಜ,
ಜೀವನ ರೂಪಿಸೊ ಹೋರಾಟದಲಿ ನೋವು ನಲಿವೆಲ್ಲಾ ಸಹಜ,
ಅವುಗಳಿಗೆಲ್ಲಾ ಹೆದರಿ ಕುಳಿತರೆ ಗೆಲ್ಲಲಾರೆ ನೀ ಬದುಕಿನಲಿ…
ಬದುಕಿನ ಪ್ರತಿದಿನ ಪ್ರತಿಕ್ಷಣ ನೀನು ಎಚ್ಚರದಿಂದ ಹೋರಾಡು,
ನಿನ್ನಯ ಬದುಕಿನ ಹಾದಿಯಲ್ಲಿ ನಿನ್ನವರಾರು ನೀ ತಿಳಿಯೋ,
ನಿನ್ನ ಸೋಲಿನಲ್ಲಿ ನಿನ್ನೊಂದಿಗಿದ್ದವರು ಮಾತ್ರ ಇಲ್ಲಿ ನಿನ್ನವರು…
ನಿನ್ನಯ ಏಳಿಗೆ ನೋಡಿ ಸಹಿಸದ ವ್ಯಕ್ತಿಗಳಿಹರು ತುಂಬಾ,
ಯಾರ ಎದುರು ತೋರಿಸಬೇಡ ಎಂದೆಂದಿಗೂ ನೀ ಜಂಭ…
ಬದುಕಲಿ ಎಷ್ಟೇ ಎತ್ತರ ಬೆಳೆದರೂ ಮೆರೆಯಬೇಡ ನೀ ತುಂಬಾ…
ನಿನ್ನಯ ಸೋಲಿಗೆ ಕಾಯುವ ಜನರಿಗೆ ಗೆಲುವಿನ ಮೂಲಕ ಉತ್ತರಿಸು,
ಕಷ್ಟದಿಂದ ಬಂದ ಜನರ ಕಷ್ಟಗಳಿಗೆ ನೀ ಸಹಕರಿಸು…
ನಿನ್ನಿಂದ ಸಹಾಯ ಪಡೆದವರ ಆಶಿರ್ವಾದವೇ ನಿನಗೆ ಶ್ರೀರಕ್ಷೆ…
ಹಣಕ್ಕಾಗಿ ನೀ ಬದುಕಬೇಡ, ಗುಣಕ್ಕಾಗಿ ನೀ ಬದುಕು…
ಜೀವನದಲ್ಲಿ ಸೋಲಿನ ಕಥೆಗಳೇ ನಿನ್ನಯ ಬದುಕಿಗೆ ಸ್ಪೂರ್ತಿ…
ನೂರು ಪಾಠವ ಕಲಿಸುವ ಸೋಲೇ, ಗೆಲುವಿನ ಹಾದಿಯ ತೋರುವುದು…
ಮಾನವನಾಗಿ ಹುಟ್ಟಿದ ಮೇಲೆ ಸೋಲು-ಗೆಲುವು ಸಾಮಾನ್ಯ,
ಅವುಗಳನೆಲ್ಲಾ ಎದುರಿಸಿ ನಿಲ್ಲು ನೀನಾಗುವೆ ಸನ್ಮಾನ್ಯ…
# ಉಲ್ಲಾಸ್ ಕಜ್ಜೋಡಿ
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…