ದೂರದ ದೇಶಲಿ ದೊಡ್ಡ ಹುದ್ದೆಲಿ
ಇರುವ ಮಂಙನ ನೆನ್ಸಿಕಂಡ್
ಹಳ್ಳಿಲಿ ಇರುವ ಅವ್ವ ಕಣ್ಣೀರ್ ಹಾಕಿದೆ
ಒಂಬತ್ತ್ ತಿಂಗ ಹೊತ್ತ್ ಹೆತ್ತ್
ಪೊರ್ಲ್ ಲಿ ಸಾಂಕಿ , ವಿದ್ಯೆ ಕಲ್ಸಿ
ವಿದೇಶಕ್ಕೆ ಕಳ್ಸಿದ ಮಂಙನ ಒಮ್ಮೆ ನೋಡೋಕು
ಪುಳ್ಳಿಕಳ ಕೈಲಿ ಹಿಡ್ದ್ ಆಡ್ಸೋಕು
ಅವ್ವನ ಆಸೆಗೆ ಮಿತಿನೇ ಇಲ್ಲೆ
ಎಸಿ ರೂಮ್ ಲಿ ಈಸಿ ಚೇರ್ ಲಿ
ಕುದ್ದ ಮಂಙಂಗೆ ಹೆತ್ತವ್ವನ ನೆಂಪಿಲ್ಲೆ
ಮೊಬೈಲ್ ಲಿ ಮುಳ್ಗಿ ಮೈಮರ್ತ ಪುಳ್ಳಿಕಳಿಗೆ
ಹಳ್ಳಿ ಅಜ್ಜಿನ ಹಳ್ಳಿ ಕತೆಗಳ ಹಂಗ್ ಬೇಕಿಲ್ಲೆ
ಸೊಸೆಗಂತೂ ಅತ್ತೆನ ನೋಡಿಕೆ ಮೊನ್ಸ್ ಇಲ್ಲೆ
ಹಳ್ಳಿ ಮನೆಲಿ ಸೋರುವ ಮಾಡ್ ನಡಿಲಿ
ಕುದ್ದ ಅವ್ವಂಗೆ ಮಂಙನ ಬುಟ್ಟ್ ಬೇರೆ ದಿಕ್ಕಿಲ್ಲೆ
ಎಲ್ಲರ ಎದ್ರ್ ಮಂಙನ ಗುಣಗಾನ ಮಾಡುವ ಅವ್ವ
ಉಂಬ ಬಟ್ಲ್ ಎದ್ರ್ ಮಾತ್ರ ಕಣ್ಣೀರ್ ಸುರ್ಸಿದೆ
ಮಂಙನ ಮಾತ್ ಗಾಗಿ ಕಾದ್ ಕಾದ್ ಮಲ್ಗಿದೆ
ಕಣ್ಣಿಗೆ ನಿದ್ದೆ ಹತ್ತುದ್ಲೆ, ಮೊನ್ಸ್ ಲಿ ಆಸೆ ಬುಡ್ದುಲೆ
ಮಂಙನ ಪೋನ್ ಇಂದ್ ಬಂದದೆ,ಈಗ ಬಂದದೆ
ಅವ್ವನ ಕಣ್ಣೀರ್ ನೋಡಿ ಬೇಜರಾಗಿ
ಮನೆಲಿರುವ ಬೊಗ್ಗ ನಾಯಿ ಕುಂಯಿ ಕುಂಯಿ ಹೇಳಿ
ಮೋರೆ ನೆಕ್ಕಿದೆ, ಅದರ ಬಾಸೆಲಿ ಸಮ್ದಾನಾ ಮಾಡ್ದೆ
ಅಪ್ರೂಪಕ್ಕೊಮ್ಮೆ ಮಂಙನ ಫೋನ್ ಬಾಕನ
ಅವ್ವ ಹಿಗ್ಗಿದೆ. ಕುಸಿಲಿ ಮತ್ತೆ ಕಣ್ಣೀರ್ ಹಾಕಿದೆ
ಹಕ್ಕಲೆ ಇರುವ ನಾಯಿ ಒಟ್ಟಿಗೆ ದುಃಖ ಹೇಳಿಕಂದೆ
ದೇವ್ರೆ ನನ್ನೊಮ್ಮೆ ಕರ್ಕಂತೇಳಿ ಬೇಡಿ ಮಲ್ಗಿದೆ
ಅವ್ವನಕ್ಕಲೆ ಯಾರ್ ಬಾಕೆ ಬೊತ್ತ್ಂತೇಳಿ ನಾಯಿ ಕಾದ್ ಕುದ್ದದೆ.
# ಅಪೂರ್ವ ಚೇತನ್ ಪೆರಂದೋಡಿ
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…