ದೂರದ ದೇಶಲಿ ದೊಡ್ಡ ಹುದ್ದೆಲಿ
ಇರುವ ಮಂಙನ ನೆನ್ಸಿಕಂಡ್
ಹಳ್ಳಿಲಿ ಇರುವ ಅವ್ವ ಕಣ್ಣೀರ್ ಹಾಕಿದೆ
ಒಂಬತ್ತ್ ತಿಂಗ ಹೊತ್ತ್ ಹೆತ್ತ್
ಪೊರ್ಲ್ ಲಿ ಸಾಂಕಿ , ವಿದ್ಯೆ ಕಲ್ಸಿ
ವಿದೇಶಕ್ಕೆ ಕಳ್ಸಿದ ಮಂಙನ ಒಮ್ಮೆ ನೋಡೋಕು
ಪುಳ್ಳಿಕಳ ಕೈಲಿ ಹಿಡ್ದ್ ಆಡ್ಸೋಕು
ಅವ್ವನ ಆಸೆಗೆ ಮಿತಿನೇ ಇಲ್ಲೆ
ಎಸಿ ರೂಮ್ ಲಿ ಈಸಿ ಚೇರ್ ಲಿ
ಕುದ್ದ ಮಂಙಂಗೆ ಹೆತ್ತವ್ವನ ನೆಂಪಿಲ್ಲೆ
ಮೊಬೈಲ್ ಲಿ ಮುಳ್ಗಿ ಮೈಮರ್ತ ಪುಳ್ಳಿಕಳಿಗೆ
ಹಳ್ಳಿ ಅಜ್ಜಿನ ಹಳ್ಳಿ ಕತೆಗಳ ಹಂಗ್ ಬೇಕಿಲ್ಲೆ
ಸೊಸೆಗಂತೂ ಅತ್ತೆನ ನೋಡಿಕೆ ಮೊನ್ಸ್ ಇಲ್ಲೆ
ಹಳ್ಳಿ ಮನೆಲಿ ಸೋರುವ ಮಾಡ್ ನಡಿಲಿ
ಕುದ್ದ ಅವ್ವಂಗೆ ಮಂಙನ ಬುಟ್ಟ್ ಬೇರೆ ದಿಕ್ಕಿಲ್ಲೆ
ಎಲ್ಲರ ಎದ್ರ್ ಮಂಙನ ಗುಣಗಾನ ಮಾಡುವ ಅವ್ವ
ಉಂಬ ಬಟ್ಲ್ ಎದ್ರ್ ಮಾತ್ರ ಕಣ್ಣೀರ್ ಸುರ್ಸಿದೆ
ಮಂಙನ ಮಾತ್ ಗಾಗಿ ಕಾದ್ ಕಾದ್ ಮಲ್ಗಿದೆ
ಕಣ್ಣಿಗೆ ನಿದ್ದೆ ಹತ್ತುದ್ಲೆ, ಮೊನ್ಸ್ ಲಿ ಆಸೆ ಬುಡ್ದುಲೆ
ಮಂಙನ ಪೋನ್ ಇಂದ್ ಬಂದದೆ,ಈಗ ಬಂದದೆ
ಅವ್ವನ ಕಣ್ಣೀರ್ ನೋಡಿ ಬೇಜರಾಗಿ
ಮನೆಲಿರುವ ಬೊಗ್ಗ ನಾಯಿ ಕುಂಯಿ ಕುಂಯಿ ಹೇಳಿ
ಮೋರೆ ನೆಕ್ಕಿದೆ, ಅದರ ಬಾಸೆಲಿ ಸಮ್ದಾನಾ ಮಾಡ್ದೆ
ಅಪ್ರೂಪಕ್ಕೊಮ್ಮೆ ಮಂಙನ ಫೋನ್ ಬಾಕನ
ಅವ್ವ ಹಿಗ್ಗಿದೆ. ಕುಸಿಲಿ ಮತ್ತೆ ಕಣ್ಣೀರ್ ಹಾಕಿದೆ
ಹಕ್ಕಲೆ ಇರುವ ನಾಯಿ ಒಟ್ಟಿಗೆ ದುಃಖ ಹೇಳಿಕಂದೆ
ದೇವ್ರೆ ನನ್ನೊಮ್ಮೆ ಕರ್ಕಂತೇಳಿ ಬೇಡಿ ಮಲ್ಗಿದೆ
ಅವ್ವನಕ್ಕಲೆ ಯಾರ್ ಬಾಕೆ ಬೊತ್ತ್ಂತೇಳಿ ನಾಯಿ ಕಾದ್ ಕುದ್ದದೆ.
# ಅಪೂರ್ವ ಚೇತನ್ ಪೆರಂದೋಡಿ
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…
ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…
ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…
ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…
ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…