ದೂರದ ದೇಶಲಿ ದೊಡ್ಡ ಹುದ್ದೆಲಿ
ಇರುವ ಮಂಙನ ನೆನ್ಸಿಕಂಡ್
ಹಳ್ಳಿಲಿ ಇರುವ ಅವ್ವ ಕಣ್ಣೀರ್ ಹಾಕಿದೆ
ಒಂಬತ್ತ್ ತಿಂಗ ಹೊತ್ತ್ ಹೆತ್ತ್
ಪೊರ್ಲ್ ಲಿ ಸಾಂಕಿ , ವಿದ್ಯೆ ಕಲ್ಸಿ
ವಿದೇಶಕ್ಕೆ ಕಳ್ಸಿದ ಮಂಙನ ಒಮ್ಮೆ ನೋಡೋಕು
ಪುಳ್ಳಿಕಳ ಕೈಲಿ ಹಿಡ್ದ್ ಆಡ್ಸೋಕು
ಅವ್ವನ ಆಸೆಗೆ ಮಿತಿನೇ ಇಲ್ಲೆ
ಎಸಿ ರೂಮ್ ಲಿ ಈಸಿ ಚೇರ್ ಲಿ
ಕುದ್ದ ಮಂಙಂಗೆ ಹೆತ್ತವ್ವನ ನೆಂಪಿಲ್ಲೆ
ಮೊಬೈಲ್ ಲಿ ಮುಳ್ಗಿ ಮೈಮರ್ತ ಪುಳ್ಳಿಕಳಿಗೆ
ಹಳ್ಳಿ ಅಜ್ಜಿನ ಹಳ್ಳಿ ಕತೆಗಳ ಹಂಗ್ ಬೇಕಿಲ್ಲೆ
ಸೊಸೆಗಂತೂ ಅತ್ತೆನ ನೋಡಿಕೆ ಮೊನ್ಸ್ ಇಲ್ಲೆ
ಹಳ್ಳಿ ಮನೆಲಿ ಸೋರುವ ಮಾಡ್ ನಡಿಲಿ
ಕುದ್ದ ಅವ್ವಂಗೆ ಮಂಙನ ಬುಟ್ಟ್ ಬೇರೆ ದಿಕ್ಕಿಲ್ಲೆ
ಎಲ್ಲರ ಎದ್ರ್ ಮಂಙನ ಗುಣಗಾನ ಮಾಡುವ ಅವ್ವ
ಉಂಬ ಬಟ್ಲ್ ಎದ್ರ್ ಮಾತ್ರ ಕಣ್ಣೀರ್ ಸುರ್ಸಿದೆ
ಮಂಙನ ಮಾತ್ ಗಾಗಿ ಕಾದ್ ಕಾದ್ ಮಲ್ಗಿದೆ
ಕಣ್ಣಿಗೆ ನಿದ್ದೆ ಹತ್ತುದ್ಲೆ, ಮೊನ್ಸ್ ಲಿ ಆಸೆ ಬುಡ್ದುಲೆ
ಮಂಙನ ಪೋನ್ ಇಂದ್ ಬಂದದೆ,ಈಗ ಬಂದದೆ
ಅವ್ವನ ಕಣ್ಣೀರ್ ನೋಡಿ ಬೇಜರಾಗಿ
ಮನೆಲಿರುವ ಬೊಗ್ಗ ನಾಯಿ ಕುಂಯಿ ಕುಂಯಿ ಹೇಳಿ
ಮೋರೆ ನೆಕ್ಕಿದೆ, ಅದರ ಬಾಸೆಲಿ ಸಮ್ದಾನಾ ಮಾಡ್ದೆ
ಅಪ್ರೂಪಕ್ಕೊಮ್ಮೆ ಮಂಙನ ಫೋನ್ ಬಾಕನ
ಅವ್ವ ಹಿಗ್ಗಿದೆ. ಕುಸಿಲಿ ಮತ್ತೆ ಕಣ್ಣೀರ್ ಹಾಕಿದೆ
ಹಕ್ಕಲೆ ಇರುವ ನಾಯಿ ಒಟ್ಟಿಗೆ ದುಃಖ ಹೇಳಿಕಂದೆ
ದೇವ್ರೆ ನನ್ನೊಮ್ಮೆ ಕರ್ಕಂತೇಳಿ ಬೇಡಿ ಮಲ್ಗಿದೆ
ಅವ್ವನಕ್ಕಲೆ ಯಾರ್ ಬಾಕೆ ಬೊತ್ತ್ಂತೇಳಿ ನಾಯಿ ಕಾದ್ ಕುದ್ದದೆ.
# ಅಪೂರ್ವ ಚೇತನ್ ಪೆರಂದೋಡಿ
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…
ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…