Advertisement
Share

ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?

ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?

ಉತ್ತರದ ಹುಡುಕಾಟದಲ್ಲಿ ಮತ್ತದೇ ಪ್ರಶ್ನೆ
ಕಣ್ಣ ರೆಪ್ಪೆಗಳೂ ಮುಚ್ಚದೇ ಕಾಯುತಿದೆ
ತುಟಿಯಂಚಿನಲಿ ಮಾತು ಹೊರಬರಲು ಯತ್ನಿಸುತಿದೆ
ಮನಸ್ಸು ಮೌನದ ಬೇಗೆಯಿಂದ
ಬೇರ್ಪಡಲು ತವಕಿಸುತಿದೆ…
ಮೌನದ ರಕ್ಕಸ ನರ್ತನಕೆ
ಮನಸ್ಸು ಶರಣಾಗಿದೆ…
ಸೋತು ಬಸವಳಿದಿದೆ…..

ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

4 hours ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

23 hours ago

ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!

ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್‌…

2 days ago

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ

ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…

2 days ago

ಇನ್ಸ್ಪೈರ್ ಅವಾರ್ಡ್ ಗೆ ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಆಯ್ಕೆ

ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…

3 days ago

ನೆಮ್ಮದಿಗಾಗಿ ಬದುಕಿ; ಹಣ-ಅಧಿಕಾರಕ್ಕಾಗಿ ಅಲ್ಲ

ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…

3 days ago