ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?
ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?
ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ
# ಅಪೂರ್ವ ಚೇತನ್ ಪೆರಂದೋಡಿ
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…