ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?
ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?
ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ
# ಅಪೂರ್ವ ಚೇತನ್ ಪೆರಂದೋಡಿ
2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…
ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…
ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…
ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…
ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…