Advertisement
Share

ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?

Advertisement
Advertisement

ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?

Advertisement
ಉತ್ತರದ ಹುಡುಕಾಟದಲ್ಲಿ ಮತ್ತದೇ ಪ್ರಶ್ನೆ
ಕಣ್ಣ ರೆಪ್ಪೆಗಳೂ ಮುಚ್ಚದೇ ಕಾಯುತಿದೆ
ತುಟಿಯಂಚಿನಲಿ ಮಾತು ಹೊರಬರಲು ಯತ್ನಿಸುತಿದೆ
ಮನಸ್ಸು ಮೌನದ ಬೇಗೆಯಿಂದ
ಬೇರ್ಪಡಲು ತವಕಿಸುತಿದೆ…
ಮೌನದ ರಕ್ಕಸ ನರ್ತನಕೆ
ಮನಸ್ಸು ಶರಣಾಗಿದೆ…
ಸೋತು ಬಸವಳಿದಿದೆ…..

ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ

Advertisement

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

11 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

11 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

16 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

16 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

17 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

18 hours ago