Advertisement
Share

ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?

ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?

ಉತ್ತರದ ಹುಡುಕಾಟದಲ್ಲಿ ಮತ್ತದೇ ಪ್ರಶ್ನೆ
ಕಣ್ಣ ರೆಪ್ಪೆಗಳೂ ಮುಚ್ಚದೇ ಕಾಯುತಿದೆ
ತುಟಿಯಂಚಿನಲಿ ಮಾತು ಹೊರಬರಲು ಯತ್ನಿಸುತಿದೆ
ಮನಸ್ಸು ಮೌನದ ಬೇಗೆಯಿಂದ
ಬೇರ್ಪಡಲು ತವಕಿಸುತಿದೆ…
ಮೌನದ ರಕ್ಕಸ ನರ್ತನಕೆ
ಮನಸ್ಸು ಶರಣಾಗಿದೆ…
ಸೋತು ಬಸವಳಿದಿದೆ…..

ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

5 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

7 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

10 hours ago