Advertisement
Share

ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?

ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?

ಉತ್ತರದ ಹುಡುಕಾಟದಲ್ಲಿ ಮತ್ತದೇ ಪ್ರಶ್ನೆ
ಕಣ್ಣ ರೆಪ್ಪೆಗಳೂ ಮುಚ್ಚದೇ ಕಾಯುತಿದೆ
ತುಟಿಯಂಚಿನಲಿ ಮಾತು ಹೊರಬರಲು ಯತ್ನಿಸುತಿದೆ
ಮನಸ್ಸು ಮೌನದ ಬೇಗೆಯಿಂದ
ಬೇರ್ಪಡಲು ತವಕಿಸುತಿದೆ…
ಮೌನದ ರಕ್ಕಸ ನರ್ತನಕೆ
ಮನಸ್ಸು ಶರಣಾಗಿದೆ…
ಸೋತು ಬಸವಳಿದಿದೆ…..

ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

5 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

16 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

16 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

16 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

22 hours ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago