Advertisement
Share

ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?

ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?

ಉತ್ತರದ ಹುಡುಕಾಟದಲ್ಲಿ ಮತ್ತದೇ ಪ್ರಶ್ನೆ
ಕಣ್ಣ ರೆಪ್ಪೆಗಳೂ ಮುಚ್ಚದೇ ಕಾಯುತಿದೆ
ತುಟಿಯಂಚಿನಲಿ ಮಾತು ಹೊರಬರಲು ಯತ್ನಿಸುತಿದೆ
ಮನಸ್ಸು ಮೌನದ ಬೇಗೆಯಿಂದ
ಬೇರ್ಪಡಲು ತವಕಿಸುತಿದೆ…
ಮೌನದ ರಕ್ಕಸ ನರ್ತನಕೆ
ಮನಸ್ಸು ಶರಣಾಗಿದೆ…
ಸೋತು ಬಸವಳಿದಿದೆ…..

ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ

# ಅಪೂರ್ವ ಚೇತನ್ ಪೆರಂದೋಡಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಉದ್ಯೋಗಗಳಿಲ್ಲವೇ? ಅಥವಾ ಉದ್ಯೋಗಕ್ಕೆ ಬೇಕಾದ ಕೌಶಲ್ಯವಿರುವವರು ಇಲ್ಲವೇ?

ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…

2 hours ago

ಅಡಿಕೆ ರೋಗ ನಿಯಂತ್ರಣಕ್ಕೆ ಕೇಂದ್ರದ ಬೆಂಬಲ – ಕ್ಯಾ. ಚೌಟಗೆ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಭರವಸೆ

ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…

13 hours ago

ಹವಾಮಾನ ವರದಿ | 23-08-2026 | ಆಗಸ್ಟ್ 25 ರವರೆಗೆ ಮಳೆ – ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…

17 hours ago

ಅಳಿವಿನಂಚಿನಲ್ಲಿದ್ದ ಪೆರಿಯಾರ್ ಹಸುವಿಗೆ ರಾಷ್ಟ್ರೀಯ ತಳಿ ಮಾನ್ಯತೆ – ಕೇರಳದ ಎರಡನೇ ದೇಶಿ ಗೋತಳಿ

ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…

18 hours ago

ಪಿಒಪಿ ಗಣಪತಿಗೆ ಬ್ರೇಕ್..? ಕರಾವಳಿಯ 90–95% ಪರಿಸರ ಸ್ನೇಹಿ ಮಾದರಿ ರಾಜ್ಯಕ್ಕೆ ಪಾಠ

ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…

20 hours ago

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಕೃಷಿಕರಿಗೆ ನಿರ್ಬಂಧ ಬೇಡ – ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕರಿಸಲು ಆಗ್ರಹ

ಪಶ್ಚಿಮ ಘಟ್ಟ ಸಂರಕ್ಷಣೆಯ ಹೆಸರಿನಲ್ಲಿ ಕೃಷಿಕರ ಜೀವನೋಪಾಯಕ್ಕೆ ನಿರ್ಬಂಧ ಹೇರಬಾರದು, ಕಸ್ತೂರಿ ರಂಗನ್…

21 hours ago