ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?
ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?
ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ
# ಅಪೂರ್ವ ಚೇತನ್ ಪೆರಂದೋಡಿ
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…