ಕಾರಣವೇ ಇಲ್ಲದೆ ಮನದಲ್ಲಿ
ಮೌನದ ಮೋಡ ಕವಿದಿದೆ.
ಹೆಜ್ಜೆಯ ಜೊತೆ ಗೆಜ್ಜೆಯ ಸಪ್ಪಳವಿದ್ದರೂ
ನಡಿಗೆಯಲಿ ಏಕಾಂಗಿತನದ ನೆರಳಿದೆ.
ಮನದ ಮೋಡಗಳ ನಡುವೆ ಅದೇಕೋ ಗುದ್ದಾಟ..
ಯಾಕೆ…..ಈ ಸಂಘರ್ಷ…?
ಹನಿಯಾಗಿ ಹರಿಯುತ್ತಿಲ್ಲ.. ಅಲ್ಲೇ ಬತ್ತಿದ ಭಾವ..
ಏನೀ … ತೊಳಲಾಟ…?
ಹೊತ್ತು ಸರಿದಷ್ಟು ಗಾಢ ಕತ್ತಲು ಆವರಿಸುತ್ತಿದೆ…
ಮೌನ ರಕ್ಕಸತನದಿ ಮೆರೆಯುತಿದೆ
ಮಾತು ಹೊರಬರಲು ಅಂಜುತಿದೆ
ಮೊಗದ ಕನ್ನಡಿಯಲಿ…..
ಪ್ರಶ್ನೆಗಳದೇ ಸುರಿಮಳೆ
ಎಲ್ಲಿದೆ …..ಉತ್ತರ…?
ಆದರೂ ಅದೆಲ್ಲೋ ಮೂಲೆಯಲಿ
ನಾಳಿನ ಬೆಳಕು ಕಾಣುವ
ಭರವಸೆಯ ಕಿಡಿಯು ಗೋಚರಿಸುತಿದೆ
# ಅಪೂರ್ವ ಚೇತನ್ ಪೆರಂದೋಡಿ
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…