Advertisement
ಅಂತರಂಗ

ಬೀದಿಯ ಕಸ – ಕಾರುವುದು ವಿಷ

Share
ಕಸವನು ಸುರಿವರು ಬೀದಿಯ ಬದಿಯಲಿ
ಸ್ವಚ್ಛತೆ ಎಲ್ಲಿದೆ ಹೇಳಮ್ಮ
ತುಚ್ಛ ಮನುಜರು ಹಾದಿಯ ಬಿಡುವರೆ
ಹುಚ್ಚರು ಇವರು ತಿಳಿಯಮ್ಮ ||
ತೊಟ್ಟಿಯು ತುಂಬಲು ಸುತ್ತಲು ಚೆಲ್ಲಲು
ಕೆಟ್ಟ ವಾಸನೆ ಹಬ್ಬುತಿದೆ
ರೋಗದ ಮಾರಿಯು ಕಾಯುತ ಕೂರಲು
ಪಕ್ಕದ ಜನರನು ಕಾಡುತಿದೆ ||
ನಿತ್ಯದ ಬದುಕಲಿ ನರಕದ ದರ್ಶನ
ಸಹಿಸಲಸಾಧ್ಯದ ವಾಸನೆಯು
ನಿಷ್ಠೆಯ ಪಥದಲಿ ಸಾಗಿರಿ ಮನುಜರೆ
ಮಾಡಲೇ ಬೇಡಿರಿ ಮೋಸವನು ||
ನಾಳಿನ ಬಾಳಿಗೆ ಕೊಳ್ಳಿಯ ಇಡುವರು
ಮಳ್ಳಿಯ ಹಾಗೆ ನಡೆಯುತಲಿ
ಬಾಳಿನ ಮೂಲಕೆ ಕುತ್ತನು ತರುವರು
ಮುಳ್ಳಿನ ಕೂಪಕೆ ಬೀಳುತಲಿ ||
ನಮ್ಮನೆ ಕಸವನು ತಿಪ್ಪೆಗೆ ಎಸೆಯದೆ
ಒಳ್ಳೆಯ ಗೊಬ್ಬರ ಮಾಡೋಣ
ಕಸದಿಂದ ರಸವನು ತಪ್ಪದೆ ಗಳಿಸುತ
ಸ್ವಸ್ಥತೆಯನ್ನು ಪಡೆಯೋಣ  ||
ಪರಿಸರ ಕಾಳಜಿ ನಮ್ಮಲಿ ಬೆಳೆಯಲಿ
ಸ್ವಚ್ಛ ಭಾರತ ತೋರೋಣ
ಮುಂದಿನ ಜನರಿಗೆ ಬಳುಬಳಿಯಾಗಿಸಿ
ಭೂತಾಯಿಯ ಮಡಿಲಲಿ ನಲಿಯೋಣ ||
#ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

6 hours ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

6 hours ago

ಅಂಜನಾದ್ರಿ ಬೆಟ್ಟ ಏರುವವರಿಗೆ ಸಮಯ ನಿಗದಿ .! ಮಧ್ಯಾಹ್ನ 11ರಿಂದ 4ರವರೆಗೆ ಪ್ರವೇಶ ಬ್ಯಾನ್

ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…

7 hours ago

ಕಲಬುರಗಿಯಲ್ಲಿ 43.2°C ತಾಪಮಾನ ದಾಖಲು..! ರಾಜ್ಯದಲ್ಲಿ ಬಿಸಿ ಏರಿಕೆ – ಮುಂದಿನ 5 ದಿನ ಎಚ್ಚರಿಕೆ

ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…

7 hours ago

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

24 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago