ಕವನ | ದುರ್ಗದ ಓಬವ್ವ

December 18, 2021
12:53 PM

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

Advertisement
Advertisement

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕಾಲದ ದೋಷವೇ..? ನಮ್ಮ ಮನಸ್ಸಿನ ದೋಷವೇ..?
February 10, 2026
7:23 AM
by: ಮಹೇಶ್ ಪುಚ್ಚಪ್ಪಾಡಿ
ಹೊಸರುಚಿ | ಆರೋಗ್ಯಕರ ಗುಜ್ಜೆ ಕರಿ | ದೋಸೆ–ಚಪಾತಿಗೆ ಸೂಪರ್ ರುಚಿ
February 7, 2026
10:00 PM
by: ದಿವ್ಯ ಮಹೇಶ್
ದ್ವೇಷ ಬೆಂಕಿಯಾಗುತ್ತದೆ, ಕ್ಷಮೆ ಬೆಳಕಾಗುತ್ತದೆ
February 7, 2026
9:42 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮದುವೆ ಎಂದರೆ ಹೆದರಿಕೆ
February 5, 2026
10:03 PM
by: ಡಾ.ಚಂದ್ರಶೇಖರ ದಾಮ್ಲೆ

You cannot copy content of this page - Copyright -The Rural Mirror