ಕವನ | ದುರ್ಗದ ಓಬವ್ವ

December 18, 2021
12:53 PM

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

Advertisement
Advertisement
Advertisement
Advertisement

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

Advertisement

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

Advertisement

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

Advertisement

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

Advertisement

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?
February 24, 2025
9:25 PM
by: ರಮೇಶ್‌ ದೇಲಂಪಾಡಿ
ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು
February 20, 2025
7:14 AM
by: ಡಾ.ಚಂದ್ರಶೇಖರ ದಾಮ್ಲೆ
ಸೀತೆ ಪುನೀತೆ | ಅಪೂರ್ಣ ರಾಮಾಯಣ
February 12, 2025
9:44 PM
by: ಡಾ.ಚಂದ್ರಶೇಖರ ದಾಮ್ಲೆ
ದೆಹಲಿ ಚುನಾವಣೆ “ರಾಜಕೀಯ ಅಹಂಕಾರ”ಕ್ಕೆ ಉತ್ತರ | ರಚನಾತ್ಮಕ ವಿಪಕ್ಷವಾಗಿ ಕೆಲಸ ಮಾಡಬಹುದೇ ಎಎಪಿ..?
February 8, 2025
9:29 PM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror