ಕವನ | ದುರ್ಗದ ಓಬವ್ವ

December 18, 2021
12:53 PM

ನಮ್ಮಯ ಹೆಮ್ಮೆಯ ಕನ್ನಡ ನಾಡಲಿ
ಚಿತ್ರದುರ್ಗವೆನ್ನುವ ನಗರವಿದೆ.
ಐತಿಹ್ಯ ಸಾರುವ ಕಲ್ಲಿನ ಕೋಟೆಯು
ನಗರದ ಮಧ್ಯದಿ ಶೋಭಿಸಿದೆ

ಬಹು ಹಿಂದಿನ ಕಾಲದಿ ನಾಯಕ ಹೊಯ್ಸಳ
ಚಾಲುಕ್ಯರೆಲ್ಲರು ಜೊತೆಗೂಡಿ.
ಏಳು ಸುತ್ತಿನಲಿ ಭದ್ರತೆ ಹೊಂದಿದ
ಕೋಟೆಯ ಕಟ್ಟಿದರೊಡಗೂಡಿ

Advertisement

ಮಸೀದಿ ದೇಗುಲ ಇದರೊಳಗಿರುವುದು
ಹಿಡಿಂಬೇಶ್ವರ ಸಹಿತದಲಿ
ಪಾಂಡವರಂದಿನ ಕಾಲದಿ ಅಜ್ಞಾತ
ವಾಸದಲಿದ್ದರು ಈ ಸ್ಥಳದಿ

ಮದಕರಿನಾಯಕರಾಳಿದ ಕಾಲದಿ
ಧಾಳಿಯನಿಟ್ಟನು ಹೈದರನು
ಒಳಗಡೆ ನುಸುಳುತ ಕಿಂಡಿಯ ಮೂಲಕ
ಬರುತಲಿ ಇದ್ದರು ಶತ್ರುಗಳು

Advertisement

ಮುದ್ದುಹನುಮನ ಪತ್ನಿಯು ಓಬವ್ವ
ಕಂಡಳು ದುರುಳರ ಆಗಮನ
ಮೌನದಿ ಒನಕೆಯ ಹಿಡಿಯುತ ನಸುಳುತ
ಜನರಿಗೆ ಬಡಿದಳು ಪುನಾ ಪುನ

ಒಡನೆಯೆ ದೊರೆಗಳ ಕಿವಿಗದು ಮುಟ್ಟಿತು
ಅರಿಗಳು ನುಸುಳುವ ಸಂಗತಿಯು
ಆದರೆ ಕಪಟದಿ ಓರ್ವನು ಇರಿಯುತ
ಓಬವ್ವಳ ಪ್ರಾಣವ ಹೀರಿದನು

Advertisement

ಒನಕೆಯ ಓಬವ್ವ ಮಾಡಿದ ತ್ಯಾಗವು
ದೇಶದ ಪ್ರೇಮವ ಸಾರುತಿದೆ
ದುರ್ಗದ ಮಹಿಮೆಗೆ ಒಪ್ಪ ಓರಣವ
ನೀಡಿದ ಖ್ಯಾತಿಯ ಕಥೆಯು ಇದೇ.

ಓಬವ್ವನ ಪ್ರತಿಮೆಯು ಇಂದಿಗು ಇರುವುದು
ದುರ್ಗದ ನಗರದಿ ಸಂತೋಷ
ತ್ಯಾಗಕೆ ಅರ್ಥವ ಹುಡುಕುವ ಜನರಿಗೆ
ಬೇರೇತಕೆ ಬೇಕಿದೆ ಸಂದೇಶ

Advertisement

#ಡಾ ವಾಣಿಶ್ರೀ ಕಾಸರಗೋಡು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಾತು ವ್ಯಕ್ತಿತ್ವವನ್ನು ತೋರಿಸುತ್ತದೆ, ಮೌನ ಅದನ್ನು ಎತ್ತುತ್ತದೆ..!
June 21, 2026
3:51 PM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಹಲಸಿನ ಕಾಯಿ ತಂಬುಳಿ – ಊಟಕ್ಕೆ ತಂಪು ನೀಡುವ ಸಾಂಪ್ರದಾಯಿಕ ಸವಿರುಚಿ
June 20, 2026
10:01 AM
by: ದಿವ್ಯ ಮಹೇಶ್
ಎಳೆಅಡಿಕೆ ಮಾತ್ರವಲ್ಲ, ಬಲಿತ ಅಡಿಕೆಯೂ ಒಡೆದು ಬೀಳುತ್ತಿದೆ…! ಕಾರಣ ಏನು?
June 13, 2026
1:49 PM
by: ಮಹೇಶ್ ಪುಚ್ಚಪ್ಪಾಡಿ
ಸುಲಭವಾಗಿ ಮಾಡಿ ರುಚಿಕರ ಹಲಸಿನ ಕಾಯಿ ಚಟ್ನಿ – ಬಿಸಿ ಅನ್ನಕ್ಕೆ ಸೂಪರ್ ಕಾಂಬಿನೇಷನ್!
June 11, 2026
6:47 AM
by: ದಿವ್ಯ ಮಹೇಶ್

You cannot copy content of this page - Copyright -The Rural Mirror